30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ: ದ.ಕ.ಸಹಿತ ನಾಲ್ಕುಜಿಲ್ಲೆಗೆ ಒಳಪಟ್ಟಂತೆ ಬೆಳ್ತಂಗಡಿಯಲ್ಲಿರುವ ಸಂತ ಲಾರೆನ್ಸ್ ಪ್ರಧಾನ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ರೆ. ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಕ್ರಿಸ್ ಮಸ್ ಹಬ್ಬದ ಪೂರ್ವವಾಗಿ ಡಿ.24ರಂದು ಸಂಜೆ 7ರಂದು ದಿವ್ಯಬಲಿಪೂಜೆ ನೆರವೇರಿಸಿದರು.

ಯೇಸುವಿನ ಜನನ ಸಂದೇಶ ಸಾರುವ ಗೋದಲಿ ಉದ್ಘಾಟನೆ, ಬಾಲ ಏಸುವಿನ ಪ್ರತಿಮೆ ಮೆರವಣಿಗೆ ಸಹಿತ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.

ಈ ವೇಳೆ ವಿಕಾರ್‌ಫಾ। ತೋಮಸ್ ಕಣ್ಣಾಂಕಲ್, ಫಾ|ಅಬ್ರಹಾಂ ಪಟೇರಿಲ್ ಜತೆಗಿದ್ದರು. ಚರ್ಚ್ ವ್ಯಾಪ್ತಿಗೆ ಒಳಪಟ್ಟಂತೆ 700ಕ್ಕೂ ಅಧಿಕ ಮಂದಿ ಬಲಿಪೂಜೆಯಲ್ಲಿ ಭಾಗವಹಿಸಿದರು. ಧರ್ಮಪ್ರಾಂತ್ಯಕ್ಕೆ ಒಳಪಟ್ಟಂತೆ ತಾಲೂಕಿನ 55 ಚರ್ಚ್‌ಗಳಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಪೂಜೆ ನೆರವೇರಿತು.

Related posts

ಭಗವದ್ಗೀತಾ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅದ್ವಿತಿ ರಾವ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ನಡ ಸ.ಹಿ.ಪ್ರಾ. ಶಾಲೆಗೆ ರೂ.1.17 ಕೋಟಿ ವೆಚ್ಚದ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!