25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

ಉಜಿರೆ : ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಡಿ. 24ರಂದು ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಲಾಯಿತು. ಸಂಜೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ಏಸು ಕ್ರಿಸ್ತರು ಹುಟ್ಟಿದ ಗಾಯನಗಳು ಹಾಡಿ ಏಸು ಕ್ರಿಸ್ತರ ಜನದ ಸಂಭ್ರಮ ಪ್ರಾರಂಭ ವಾಯಿತು.

ದಿವ್ಯ ಬಲಿ ಪೂಜೆ ಮಂಗಳೂರಿನ ಜೆಪ್ಪು ಸೆಮಿನಾರಿಯ ಧರ್ಮ ಗುರು ವಂ. ಫಾ. ಐವನ್ ಡಿಸೋಜಾ ಪ್ರಧಾನ ದಿವ್ಯ ಬಲಿ ಪೂಜೆ ಅರ್ಪಿಸಿ ಪ್ರವಚನ ನೀಡಿದರು. ನಾವೆಲ್ಲರೂ ಸಹೋದರತೆಯಿಂದ ಬಾಳಿ ಪರರಿಗೂ ಪ್ರೀತಿ ವಿಶ್ವಾಸ ದಿಂದ ನೆಲೆಸಬೇಕು. ನಾವು ನೀಡಿದ ಧಾನ ಧರ್ಮ ಗುಪ್ತವಾಗಿರಬೇಕೇ ಹೊರತು ಹತ್ತಾರು ಜನರಿಗೆ ಪ್ರಚಾರ ಪಡಿಸುವದಲ್ಲ ಮತ್ತು ಸಹಾಯ ಮಾಡಿದವರಿಂದ ಯಾರು ಪ್ರತಿಫಲ ನಿರೀಕ್ಸಿಸಬಾರದು ಆವಾಗ ಮಾತ್ರ ಕ್ರಿಸ್ತ ಜನ್ಮ ದಿನ ಆಚರಣೆ ಸಾರ್ಥಕವಾಗುತ್ತದೆ ಎಂದರು. ಚರ್ಚ್ ಪ್ರಧಾನ ಧರ್ಮ ಗುರು ವಂ. ಅಬೆಲ್ ಲೋಬೊ, ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೊ ದಿವ್ಯ ಬಲಿ ಪೂಜೆಯಲ್ಲಿ ಭಾಗವಿಸಿದ್ದರು. ಭಕ್ತಾದಿಗಳೆಲ್ಲರೂ ಏಸು ಸ್ವಾಮಿಯ ಮೂರ್ತಿಗೆ ಭಕ್ತಿಯಿಂದ ನಮಿಸಿದರು. ದಾನಿ ಗಳಿಗೆ ಮೇಣದ ಬತ್ತಿ ವಿತರಿಸಲಾಹಿತು. ಐ ಸಿ ವೈ ಎಂ ಸಂಘದಿಂದ ಕೇಕ್ ಡ್ರಾ, ಸಾಂತಾಕ್ಲಾಸ್, ಸುಡು ಮದ್ದು ಪ್ರದರ್ಶನ ನಡೆಯಿತು.

ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಪಾಲನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು ಸರ್ವ ರೀತಿಯಲ್ಲಿ ಸಹಕರಿಸಿದರು.

Related posts

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!