ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

ಉಜಿರೆ : ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಡಿ. 24ರಂದು ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಲಾಯಿತು. ಸಂಜೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ಏಸು ಕ್ರಿಸ್ತರು ಹುಟ್ಟಿದ ಗಾಯನಗಳು ಹಾಡಿ ಏಸು ಕ್ರಿಸ್ತರ ಜನದ ಸಂಭ್ರಮ ಪ್ರಾರಂಭ ವಾಯಿತು.

ದಿವ್ಯ ಬಲಿ ಪೂಜೆ ಮಂಗಳೂರಿನ ಜೆಪ್ಪು ಸೆಮಿನಾರಿಯ ಧರ್ಮ ಗುರು ವಂ. ಫಾ. ಐವನ್ ಡಿಸೋಜಾ ಪ್ರಧಾನ ದಿವ್ಯ ಬಲಿ ಪೂಜೆ ಅರ್ಪಿಸಿ ಪ್ರವಚನ ನೀಡಿದರು. ನಾವೆಲ್ಲರೂ ಸಹೋದರತೆಯಿಂದ ಬಾಳಿ ಪರರಿಗೂ ಪ್ರೀತಿ ವಿಶ್ವಾಸ ದಿಂದ ನೆಲೆಸಬೇಕು. ನಾವು ನೀಡಿದ ಧಾನ ಧರ್ಮ ಗುಪ್ತವಾಗಿರಬೇಕೇ ಹೊರತು ಹತ್ತಾರು ಜನರಿಗೆ ಪ್ರಚಾರ ಪಡಿಸುವದಲ್ಲ ಮತ್ತು ಸಹಾಯ ಮಾಡಿದವರಿಂದ ಯಾರು ಪ್ರತಿಫಲ ನಿರೀಕ್ಸಿಸಬಾರದು ಆವಾಗ ಮಾತ್ರ ಕ್ರಿಸ್ತ ಜನ್ಮ ದಿನ ಆಚರಣೆ ಸಾರ್ಥಕವಾಗುತ್ತದೆ ಎಂದರು. ಚರ್ಚ್ ಪ್ರಧಾನ ಧರ್ಮ ಗುರು ವಂ. ಅಬೆಲ್ ಲೋಬೊ, ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೊ ದಿವ್ಯ ಬಲಿ ಪೂಜೆಯಲ್ಲಿ ಭಾಗವಿಸಿದ್ದರು. ಭಕ್ತಾದಿಗಳೆಲ್ಲರೂ ಏಸು ಸ್ವಾಮಿಯ ಮೂರ್ತಿಗೆ ಭಕ್ತಿಯಿಂದ ನಮಿಸಿದರು. ದಾನಿ ಗಳಿಗೆ ಮೇಣದ ಬತ್ತಿ ವಿತರಿಸಲಾಹಿತು. ಐ ಸಿ ವೈ ಎಂ ಸಂಘದಿಂದ ಕೇಕ್ ಡ್ರಾ, ಸಾಂತಾಕ್ಲಾಸ್, ಸುಡು ಮದ್ದು ಪ್ರದರ್ಶನ ನಡೆಯಿತು.

ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಪಾಲನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು ಸರ್ವ ರೀತಿಯಲ್ಲಿ ಸಹಕರಿಸಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಕೊಕ್ಕಡ ಸೌತಡ್ಕ ದೇವಸ್ಥಾನದ ಬಳಿಯ ಕೆಲ ಅಂಗಡಿಗಳ ತೆರವಿಗೆ ಕಂದಾಯ ಇಲಾಖೆ ನೋಟೀಸು: 10 ದಿನಗಳ ಗಡುವು

Suddi Udaya

ಮಹಿಳಾ ಹೆಡ್ ಕಾನ್ ಸ್ಟೇಬಲ್ ಹುದ್ದೆಗೆ ಮುಂಭಡ್ತಿಗೊಂಡ ವೇಣೂರು ಪೊಲೀಸ್ ಠಾಣೆಯ ಜಯಶ್ರೀ

Suddi Udaya
error: Content is protected !!