23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

ಉಜಿರೆ : ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಡಿ. 24ರಂದು ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಲಾಯಿತು. ಸಂಜೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ಏಸು ಕ್ರಿಸ್ತರು ಹುಟ್ಟಿದ ಗಾಯನಗಳು ಹಾಡಿ ಏಸು ಕ್ರಿಸ್ತರ ಜನದ ಸಂಭ್ರಮ ಪ್ರಾರಂಭ ವಾಯಿತು.

ದಿವ್ಯ ಬಲಿ ಪೂಜೆ ಮಂಗಳೂರಿನ ಜೆಪ್ಪು ಸೆಮಿನಾರಿಯ ಧರ್ಮ ಗುರು ವಂ. ಫಾ. ಐವನ್ ಡಿಸೋಜಾ ಪ್ರಧಾನ ದಿವ್ಯ ಬಲಿ ಪೂಜೆ ಅರ್ಪಿಸಿ ಪ್ರವಚನ ನೀಡಿದರು. ನಾವೆಲ್ಲರೂ ಸಹೋದರತೆಯಿಂದ ಬಾಳಿ ಪರರಿಗೂ ಪ್ರೀತಿ ವಿಶ್ವಾಸ ದಿಂದ ನೆಲೆಸಬೇಕು. ನಾವು ನೀಡಿದ ಧಾನ ಧರ್ಮ ಗುಪ್ತವಾಗಿರಬೇಕೇ ಹೊರತು ಹತ್ತಾರು ಜನರಿಗೆ ಪ್ರಚಾರ ಪಡಿಸುವದಲ್ಲ ಮತ್ತು ಸಹಾಯ ಮಾಡಿದವರಿಂದ ಯಾರು ಪ್ರತಿಫಲ ನಿರೀಕ್ಸಿಸಬಾರದು ಆವಾಗ ಮಾತ್ರ ಕ್ರಿಸ್ತ ಜನ್ಮ ದಿನ ಆಚರಣೆ ಸಾರ್ಥಕವಾಗುತ್ತದೆ ಎಂದರು. ಚರ್ಚ್ ಪ್ರಧಾನ ಧರ್ಮ ಗುರು ವಂ. ಅಬೆಲ್ ಲೋಬೊ, ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೊ ದಿವ್ಯ ಬಲಿ ಪೂಜೆಯಲ್ಲಿ ಭಾಗವಿಸಿದ್ದರು. ಭಕ್ತಾದಿಗಳೆಲ್ಲರೂ ಏಸು ಸ್ವಾಮಿಯ ಮೂರ್ತಿಗೆ ಭಕ್ತಿಯಿಂದ ನಮಿಸಿದರು. ದಾನಿ ಗಳಿಗೆ ಮೇಣದ ಬತ್ತಿ ವಿತರಿಸಲಾಹಿತು. ಐ ಸಿ ವೈ ಎಂ ಸಂಘದಿಂದ ಕೇಕ್ ಡ್ರಾ, ಸಾಂತಾಕ್ಲಾಸ್, ಸುಡು ಮದ್ದು ಪ್ರದರ್ಶನ ನಡೆಯಿತು.

ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಪಾಲನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು ಸರ್ವ ರೀತಿಯಲ್ಲಿ ಸಹಕರಿಸಿದರು.

Related posts

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ತೋಟತ್ತಾಡಿ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಕ್ರೀಡಾಕೂಟ

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya
error: Content is protected !!