July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

ಉಜಿರೆ : ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಡಿ. 24ರಂದು ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಲಾಯಿತು. ಸಂಜೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ಏಸು ಕ್ರಿಸ್ತರು ಹುಟ್ಟಿದ ಗಾಯನಗಳು ಹಾಡಿ ಏಸು ಕ್ರಿಸ್ತರ ಜನದ ಸಂಭ್ರಮ ಪ್ರಾರಂಭ ವಾಯಿತು.

ದಿವ್ಯ ಬಲಿ ಪೂಜೆ ಮಂಗಳೂರಿನ ಜೆಪ್ಪು ಸೆಮಿನಾರಿಯ ಧರ್ಮ ಗುರು ವಂ. ಫಾ. ಐವನ್ ಡಿಸೋಜಾ ಪ್ರಧಾನ ದಿವ್ಯ ಬಲಿ ಪೂಜೆ ಅರ್ಪಿಸಿ ಪ್ರವಚನ ನೀಡಿದರು. ನಾವೆಲ್ಲರೂ ಸಹೋದರತೆಯಿಂದ ಬಾಳಿ ಪರರಿಗೂ ಪ್ರೀತಿ ವಿಶ್ವಾಸ ದಿಂದ ನೆಲೆಸಬೇಕು. ನಾವು ನೀಡಿದ ಧಾನ ಧರ್ಮ ಗುಪ್ತವಾಗಿರಬೇಕೇ ಹೊರತು ಹತ್ತಾರು ಜನರಿಗೆ ಪ್ರಚಾರ ಪಡಿಸುವದಲ್ಲ ಮತ್ತು ಸಹಾಯ ಮಾಡಿದವರಿಂದ ಯಾರು ಪ್ರತಿಫಲ ನಿರೀಕ್ಸಿಸಬಾರದು ಆವಾಗ ಮಾತ್ರ ಕ್ರಿಸ್ತ ಜನ್ಮ ದಿನ ಆಚರಣೆ ಸಾರ್ಥಕವಾಗುತ್ತದೆ ಎಂದರು. ಚರ್ಚ್ ಪ್ರಧಾನ ಧರ್ಮ ಗುರು ವಂ. ಅಬೆಲ್ ಲೋಬೊ, ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೊ ದಿವ್ಯ ಬಲಿ ಪೂಜೆಯಲ್ಲಿ ಭಾಗವಿಸಿದ್ದರು. ಭಕ್ತಾದಿಗಳೆಲ್ಲರೂ ಏಸು ಸ್ವಾಮಿಯ ಮೂರ್ತಿಗೆ ಭಕ್ತಿಯಿಂದ ನಮಿಸಿದರು. ದಾನಿ ಗಳಿಗೆ ಮೇಣದ ಬತ್ತಿ ವಿತರಿಸಲಾಹಿತು. ಐ ಸಿ ವೈ ಎಂ ಸಂಘದಿಂದ ಕೇಕ್ ಡ್ರಾ, ಸಾಂತಾಕ್ಲಾಸ್, ಸುಡು ಮದ್ದು ಪ್ರದರ್ಶನ ನಡೆಯಿತು.

ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಪಾಲನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು ಸರ್ವ ರೀತಿಯಲ್ಲಿ ಸಹಕರಿಸಿದರು.

Related posts

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಕೊಕ್ಕಡ: ಸಂತ ಜೋನರ ದೇವಾಲಯದಲ್ಲಿ ಪವಿತ್ರ ಗುರುವಾರ

Suddi Udaya

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಮುಂಡೂರು ಮಂಗಳಗಿರಿ ಶ್ರೀ ನಾಗಂಬಿಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ಕೊಡುಗೆ

Suddi Udaya

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya
error: Content is protected !!