24 C
ಪುತ್ತೂರು, ಬೆಳ್ತಂಗಡಿ
April 3, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

ಮುಂಡಾಜೆ: ವಿದ್ಯುತ್ ಲೈನ್ ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಮುಂಡಾಜೆಯ ಕಡಂಬಳ್ಳಿ ಎಂಬಲ್ಲಿ ಡಿ.24 ರಂದು ನಡೆದಿದೆ. ಮರ ವಿದ್ಯುತ್ ಲೈನ್ ಮತ್ತು ರಸ್ತೆ ಮೇಲೆ ಉರುಳಿ ಬಿದ್ದಾಗ ಎರಡು ಎಲ್ ಟಿ ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ಈ ವೇಳೆ ಬೆಂಕಿ ಉತ್ಪತ್ತಿಯಾಗಿ ಸುಮಾರು ಒಂದು ಎಕರೆಯಷ್ಟು ಗುಡ್ಡ ಪ್ರದೇಶ ಸುಟ್ಟು ಹೋಗಿದೆ.

ಗುಡ್ಡದ ಸಮೀಪದಲ್ಲಿ ರಬ್ಬರ್ ತೋಟವಿದ್ದು ಅಲ್ಲಿಗೆ ಬೆಂಕಿ ಪಸರಿಸದಂತೆ ಸ್ಥಳೀಯರು ಸಹಕರಿಸಿದರು. ರಬ್ಬರ್ ತೋಟಕ್ಕೆ ಬೆಂಕಿ ಪಸರಿಸುತ್ತಿದ್ದರೆ ಹೆಚ್ಚಿನ ನಷ್ಟ ಉಂಟಾಗುತ್ತಿತ್ತು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಮೆಸ್ಕಾಂ ನವರು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ ಕಾರಣ ಹೆಚ್ಚಿನ ಅಪಾಯ ತಪ್ಪಿದೆ. ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಶಿಬಾಜೆ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಶ್ರೀ ದೇವರಿಗೆ ಕಲಶಾಭಿಷೇಕ, ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

Suddi Udaya
error: Content is protected !!