September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

ಮುಂಡಾಜೆ: ವಿದ್ಯುತ್ ಲೈನ್ ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಮುಂಡಾಜೆಯ ಕಡಂಬಳ್ಳಿ ಎಂಬಲ್ಲಿ ಡಿ.24 ರಂದು ನಡೆದಿದೆ. ಮರ ವಿದ್ಯುತ್ ಲೈನ್ ಮತ್ತು ರಸ್ತೆ ಮೇಲೆ ಉರುಳಿ ಬಿದ್ದಾಗ ಎರಡು ಎಲ್ ಟಿ ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ಈ ವೇಳೆ ಬೆಂಕಿ ಉತ್ಪತ್ತಿಯಾಗಿ ಸುಮಾರು ಒಂದು ಎಕರೆಯಷ್ಟು ಗುಡ್ಡ ಪ್ರದೇಶ ಸುಟ್ಟು ಹೋಗಿದೆ.

ಗುಡ್ಡದ ಸಮೀಪದಲ್ಲಿ ರಬ್ಬರ್ ತೋಟವಿದ್ದು ಅಲ್ಲಿಗೆ ಬೆಂಕಿ ಪಸರಿಸದಂತೆ ಸ್ಥಳೀಯರು ಸಹಕರಿಸಿದರು. ರಬ್ಬರ್ ತೋಟಕ್ಕೆ ಬೆಂಕಿ ಪಸರಿಸುತ್ತಿದ್ದರೆ ಹೆಚ್ಚಿನ ನಷ್ಟ ಉಂಟಾಗುತ್ತಿತ್ತು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಮೆಸ್ಕಾಂ ನವರು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ ಕಾರಣ ಹೆಚ್ಚಿನ ಅಪಾಯ ತಪ್ಪಿದೆ. ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya
error: Content is protected !!