24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

ಉಜಿರೆ : ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಡಿ. 24ರಂದು ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಲಾಯಿತು. ಸಂಜೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ಏಸು ಕ್ರಿಸ್ತರು ಹುಟ್ಟಿದ ಗಾಯನಗಳು ಹಾಡಿ ಏಸು ಕ್ರಿಸ್ತರ ಜನದ ಸಂಭ್ರಮ ಪ್ರಾರಂಭ ವಾಯಿತು.

ದಿವ್ಯ ಬಲಿ ಪೂಜೆ ಮಂಗಳೂರಿನ ಜೆಪ್ಪು ಸೆಮಿನಾರಿಯ ಧರ್ಮ ಗುರು ವಂ. ಫಾ. ಐವನ್ ಡಿಸೋಜಾ ಪ್ರಧಾನ ದಿವ್ಯ ಬಲಿ ಪೂಜೆ ಅರ್ಪಿಸಿ ಪ್ರವಚನ ನೀಡಿದರು. ನಾವೆಲ್ಲರೂ ಸಹೋದರತೆಯಿಂದ ಬಾಳಿ ಪರರಿಗೂ ಪ್ರೀತಿ ವಿಶ್ವಾಸ ದಿಂದ ನೆಲೆಸಬೇಕು. ನಾವು ನೀಡಿದ ಧಾನ ಧರ್ಮ ಗುಪ್ತವಾಗಿರಬೇಕೇ ಹೊರತು ಹತ್ತಾರು ಜನರಿಗೆ ಪ್ರಚಾರ ಪಡಿಸುವದಲ್ಲ ಮತ್ತು ಸಹಾಯ ಮಾಡಿದವರಿಂದ ಯಾರು ಪ್ರತಿಫಲ ನಿರೀಕ್ಸಿಸಬಾರದು ಆವಾಗ ಮಾತ್ರ ಕ್ರಿಸ್ತ ಜನ್ಮ ದಿನ ಆಚರಣೆ ಸಾರ್ಥಕವಾಗುತ್ತದೆ ಎಂದರು. ಚರ್ಚ್ ಪ್ರಧಾನ ಧರ್ಮ ಗುರು ವಂ. ಅಬೆಲ್ ಲೋಬೊ, ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೊ ದಿವ್ಯ ಬಲಿ ಪೂಜೆಯಲ್ಲಿ ಭಾಗವಿಸಿದ್ದರು. ಭಕ್ತಾದಿಗಳೆಲ್ಲರೂ ಏಸು ಸ್ವಾಮಿಯ ಮೂರ್ತಿಗೆ ಭಕ್ತಿಯಿಂದ ನಮಿಸಿದರು. ದಾನಿ ಗಳಿಗೆ ಮೇಣದ ಬತ್ತಿ ವಿತರಿಸಲಾಹಿತು. ಐ ಸಿ ವೈ ಎಂ ಸಂಘದಿಂದ ಕೇಕ್ ಡ್ರಾ, ಸಾಂತಾಕ್ಲಾಸ್, ಸುಡು ಮದ್ದು ಪ್ರದರ್ಶನ ನಡೆಯಿತು.

ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಪಾಲನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು ಸರ್ವ ರೀತಿಯಲ್ಲಿ ಸಹಕರಿಸಿದರು.

Related posts

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಬೆಳಾಲು ಶ್ರೀಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!