26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

ಉಜಿರೆ : ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಡಿ. 24ರಂದು ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಲಾಯಿತು. ಸಂಜೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ಏಸು ಕ್ರಿಸ್ತರು ಹುಟ್ಟಿದ ಗಾಯನಗಳು ಹಾಡಿ ಏಸು ಕ್ರಿಸ್ತರ ಜನದ ಸಂಭ್ರಮ ಪ್ರಾರಂಭ ವಾಯಿತು.

ದಿವ್ಯ ಬಲಿ ಪೂಜೆ ಮಂಗಳೂರಿನ ಜೆಪ್ಪು ಸೆಮಿನಾರಿಯ ಧರ್ಮ ಗುರು ವಂ. ಫಾ. ಐವನ್ ಡಿಸೋಜಾ ಪ್ರಧಾನ ದಿವ್ಯ ಬಲಿ ಪೂಜೆ ಅರ್ಪಿಸಿ ಪ್ರವಚನ ನೀಡಿದರು. ನಾವೆಲ್ಲರೂ ಸಹೋದರತೆಯಿಂದ ಬಾಳಿ ಪರರಿಗೂ ಪ್ರೀತಿ ವಿಶ್ವಾಸ ದಿಂದ ನೆಲೆಸಬೇಕು. ನಾವು ನೀಡಿದ ಧಾನ ಧರ್ಮ ಗುಪ್ತವಾಗಿರಬೇಕೇ ಹೊರತು ಹತ್ತಾರು ಜನರಿಗೆ ಪ್ರಚಾರ ಪಡಿಸುವದಲ್ಲ ಮತ್ತು ಸಹಾಯ ಮಾಡಿದವರಿಂದ ಯಾರು ಪ್ರತಿಫಲ ನಿರೀಕ್ಸಿಸಬಾರದು ಆವಾಗ ಮಾತ್ರ ಕ್ರಿಸ್ತ ಜನ್ಮ ದಿನ ಆಚರಣೆ ಸಾರ್ಥಕವಾಗುತ್ತದೆ ಎಂದರು. ಚರ್ಚ್ ಪ್ರಧಾನ ಧರ್ಮ ಗುರು ವಂ. ಅಬೆಲ್ ಲೋಬೊ, ಅನುಗ್ರಹ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ವಿಜಯ್ ಲೋಬೊ ದಿವ್ಯ ಬಲಿ ಪೂಜೆಯಲ್ಲಿ ಭಾಗವಿಸಿದ್ದರು. ಭಕ್ತಾದಿಗಳೆಲ್ಲರೂ ಏಸು ಸ್ವಾಮಿಯ ಮೂರ್ತಿಗೆ ಭಕ್ತಿಯಿಂದ ನಮಿಸಿದರು. ದಾನಿ ಗಳಿಗೆ ಮೇಣದ ಬತ್ತಿ ವಿತರಿಸಲಾಹಿತು. ಐ ಸಿ ವೈ ಎಂ ಸಂಘದಿಂದ ಕೇಕ್ ಡ್ರಾ, ಸಾಂತಾಕ್ಲಾಸ್, ಸುಡು ಮದ್ದು ಪ್ರದರ್ಶನ ನಡೆಯಿತು.

ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಹಾಗೂ ಪಾಲನಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದು ಸರ್ವ ರೀತಿಯಲ್ಲಿ ಸಹಕರಿಸಿದರು.

Related posts

ಕಲ್ಮಂಜ: ಅಹಲ್ಯಾ ಯಾನೆ ರಮಾ ಚಿಪ್ಲೂಣ್ಕರ್ ನಿಧನ

Suddi Udaya

ನೀರಿಗೆ ಇಳಿದಿದ್ದ ವೃದ್ದೆಯೋರ್ವರ ಶವ ಬೆಳಾಲು ಗ್ರಾಮದ ಅವೇಕೆ ಎಂಬಲ್ಲಿ ಪತ್ತೆ

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya
error: Content is protected !!