32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

ಮುಂಡಾಜೆ: ವಿದ್ಯುತ್ ಲೈನ್ ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಮುಂಡಾಜೆಯ ಕಡಂಬಳ್ಳಿ ಎಂಬಲ್ಲಿ ಡಿ.24 ರಂದು ನಡೆದಿದೆ. ಮರ ವಿದ್ಯುತ್ ಲೈನ್ ಮತ್ತು ರಸ್ತೆ ಮೇಲೆ ಉರುಳಿ ಬಿದ್ದಾಗ ಎರಡು ಎಲ್ ಟಿ ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ಈ ವೇಳೆ ಬೆಂಕಿ ಉತ್ಪತ್ತಿಯಾಗಿ ಸುಮಾರು ಒಂದು ಎಕರೆಯಷ್ಟು ಗುಡ್ಡ ಪ್ರದೇಶ ಸುಟ್ಟು ಹೋಗಿದೆ.

ಗುಡ್ಡದ ಸಮೀಪದಲ್ಲಿ ರಬ್ಬರ್ ತೋಟವಿದ್ದು ಅಲ್ಲಿಗೆ ಬೆಂಕಿ ಪಸರಿಸದಂತೆ ಸ್ಥಳೀಯರು ಸಹಕರಿಸಿದರು. ರಬ್ಬರ್ ತೋಟಕ್ಕೆ ಬೆಂಕಿ ಪಸರಿಸುತ್ತಿದ್ದರೆ ಹೆಚ್ಚಿನ ನಷ್ಟ ಉಂಟಾಗುತ್ತಿತ್ತು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಮೆಸ್ಕಾಂ ನವರು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ ಕಾರಣ ಹೆಚ್ಚಿನ ಅಪಾಯ ತಪ್ಪಿದೆ. ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪಾಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಮದ್ದಡ್ಕ ಹೆಲ್ಪ್ ಲೈನ್ ವತಿಯಿಂದ ಇಫ್ತಾರ್ ಕೂಟ: ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!