25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

ಮುಂಡಾಜೆ: ವಿದ್ಯುತ್ ಲೈನ್ ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಮುಂಡಾಜೆಯ ಕಡಂಬಳ್ಳಿ ಎಂಬಲ್ಲಿ ಡಿ.24 ರಂದು ನಡೆದಿದೆ. ಮರ ವಿದ್ಯುತ್ ಲೈನ್ ಮತ್ತು ರಸ್ತೆ ಮೇಲೆ ಉರುಳಿ ಬಿದ್ದಾಗ ಎರಡು ಎಲ್ ಟಿ ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ಈ ವೇಳೆ ಬೆಂಕಿ ಉತ್ಪತ್ತಿಯಾಗಿ ಸುಮಾರು ಒಂದು ಎಕರೆಯಷ್ಟು ಗುಡ್ಡ ಪ್ರದೇಶ ಸುಟ್ಟು ಹೋಗಿದೆ.

ಗುಡ್ಡದ ಸಮೀಪದಲ್ಲಿ ರಬ್ಬರ್ ತೋಟವಿದ್ದು ಅಲ್ಲಿಗೆ ಬೆಂಕಿ ಪಸರಿಸದಂತೆ ಸ್ಥಳೀಯರು ಸಹಕರಿಸಿದರು. ರಬ್ಬರ್ ತೋಟಕ್ಕೆ ಬೆಂಕಿ ಪಸರಿಸುತ್ತಿದ್ದರೆ ಹೆಚ್ಚಿನ ನಷ್ಟ ಉಂಟಾಗುತ್ತಿತ್ತು. ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಮೆಸ್ಕಾಂ ನವರು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿದ ಕಾರಣ ಹೆಚ್ಚಿನ ಅಪಾಯ ತಪ್ಪಿದೆ. ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಉಜಿರೆಯಲ್ಲಿ ಕ್ಯಾಂಪಸ್ ನೇಮಕಾತಿ ಚಾಲನೆ

Suddi Udaya
error: Content is protected !!