26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ‘ಕೆರೆಗೆ’ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಡಿ.26ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಯ ಅವ್ಯವಸ್ಥೆ ಹಾಗೂ ಒತ್ತುವರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದ ಹಿನ್ನಲೆ ಬಿ.ಎಸ್.ಪಾಟೀಲ್ ಅವರು ಕುವೆಟ್ಟು ಪಂಚಾಯತ್ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದ್ದು.‌ಈ ವೇಳೆ ಕೆರೆಯ ಸುತ್ತಮುತ್ತಲಿನ ಪ್ರದೇಶದ ವಾತಾವರಣ ನೋಡಿ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದು. ಕೆರೆಯ ಸುತ್ತ ಕಾರಿಡಾರ್ ನಿರ್ಮಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು, ಅಲ್ಲದೆ ಕೆರೆಯ ಒತ್ತುವರಿಯ ಬಗ್ಗೆ ಹತ್ತು ದಿನದ ಒಳಗೆ ಸರ್ವೆ ನಡೆಸಿ ವರದಿ ನೀಡುವಂತೆ ಬೆಳ್ತಂಗಡಿ ತಹಶೀಲ್ದಾರರಿಗೆ ಸ್ಥಳದಲ್ಲಿಯೇ ಸೂಚಿಸಿದರು.

ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ವೇಳೆ ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ನಟರಾಜ್ ಎಮ್.ಎ, ಇನ್ಸ್ಪೆಕ್ಟರ್ ಅಮಾನುಲ್ಲಾ, ಸುರೇಶ್ , ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕುವೆಟ್ಟು ಗ್ರಾಮ ಪಂಚಾಯತ್ ಪಿಡಿಓ ಇಮ್ತಿಯಾಜ್ , ಕಂದಾಯ ನಿರೀಕ್ಷಕ ಪ್ರತೀಷ್, ಗ್ರಾಮ ಆಡಳಿತಾಧಿಕಾರಿ ಗೌತಮಿ ಹಾಗೂ ಮತ್ತಿತರರು ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಬೆಳ್ತಂಗಡಿ ಆನ್ಸ್ ಕ್ಲಬ್ ನೂತನ ಪದಾಧಿಕಾರಿಗಳ‌ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷೆಯಾಗಿ ಗಾಯತ್ರಿ ಶ್ರೀಧರ್ ಹಾಗೂ ಕಾರ್ಯದರ್ಶಿಯಾಗಿ ಡಾ.ವಿನಯಾ ಕಿಶೋರ್ ಅಧಿಕಾರ ಸ್ವೀಕಾರ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya
error: Content is protected !!