July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ‘ಕೆರೆಗೆ’ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಡಿ.26ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಯ ಅವ್ಯವಸ್ಥೆ ಹಾಗೂ ಒತ್ತುವರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದ ಹಿನ್ನಲೆ ಬಿ.ಎಸ್.ಪಾಟೀಲ್ ಅವರು ಕುವೆಟ್ಟು ಪಂಚಾಯತ್ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದ್ದು.‌ಈ ವೇಳೆ ಕೆರೆಯ ಸುತ್ತಮುತ್ತಲಿನ ಪ್ರದೇಶದ ವಾತಾವರಣ ನೋಡಿ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದು. ಕೆರೆಯ ಸುತ್ತ ಕಾರಿಡಾರ್ ನಿರ್ಮಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು, ಅಲ್ಲದೆ ಕೆರೆಯ ಒತ್ತುವರಿಯ ಬಗ್ಗೆ ಹತ್ತು ದಿನದ ಒಳಗೆ ಸರ್ವೆ ನಡೆಸಿ ವರದಿ ನೀಡುವಂತೆ ಬೆಳ್ತಂಗಡಿ ತಹಶೀಲ್ದಾರರಿಗೆ ಸ್ಥಳದಲ್ಲಿಯೇ ಸೂಚಿಸಿದರು.

ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ವೇಳೆ ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ನಟರಾಜ್ ಎಮ್.ಎ, ಇನ್ಸ್ಪೆಕ್ಟರ್ ಅಮಾನುಲ್ಲಾ, ಸುರೇಶ್ , ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕುವೆಟ್ಟು ಗ್ರಾಮ ಪಂಚಾಯತ್ ಪಿಡಿಓ ಇಮ್ತಿಯಾಜ್ , ಕಂದಾಯ ನಿರೀಕ್ಷಕ ಪ್ರತೀಷ್, ಗ್ರಾಮ ಆಡಳಿತಾಧಿಕಾರಿ ಗೌತಮಿ ಹಾಗೂ ಮತ್ತಿತರರು ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುತ್ಲೂರು ಶಾಲಾ ಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya
error: Content is protected !!