September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ‘ಕೆರೆಗೆ’ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಡಿ.26ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಯ ಅವ್ಯವಸ್ಥೆ ಹಾಗೂ ಒತ್ತುವರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದ ಹಿನ್ನಲೆ ಬಿ.ಎಸ್.ಪಾಟೀಲ್ ಅವರು ಕುವೆಟ್ಟು ಪಂಚಾಯತ್ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದ್ದು.‌ಈ ವೇಳೆ ಕೆರೆಯ ಸುತ್ತಮುತ್ತಲಿನ ಪ್ರದೇಶದ ವಾತಾವರಣ ನೋಡಿ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದು. ಕೆರೆಯ ಸುತ್ತ ಕಾರಿಡಾರ್ ನಿರ್ಮಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು, ಅಲ್ಲದೆ ಕೆರೆಯ ಒತ್ತುವರಿಯ ಬಗ್ಗೆ ಹತ್ತು ದಿನದ ಒಳಗೆ ಸರ್ವೆ ನಡೆಸಿ ವರದಿ ನೀಡುವಂತೆ ಬೆಳ್ತಂಗಡಿ ತಹಶೀಲ್ದಾರರಿಗೆ ಸ್ಥಳದಲ್ಲಿಯೇ ಸೂಚಿಸಿದರು.

ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ವೇಳೆ ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ನಟರಾಜ್ ಎಮ್.ಎ, ಇನ್ಸ್ಪೆಕ್ಟರ್ ಅಮಾನುಲ್ಲಾ, ಸುರೇಶ್ , ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕುವೆಟ್ಟು ಗ್ರಾಮ ಪಂಚಾಯತ್ ಪಿಡಿಓ ಇಮ್ತಿಯಾಜ್ , ಕಂದಾಯ ನಿರೀಕ್ಷಕ ಪ್ರತೀಷ್, ಗ್ರಾಮ ಆಡಳಿತಾಧಿಕಾರಿ ಗೌತಮಿ ಹಾಗೂ ಮತ್ತಿತರರು ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya

ಡಿ.7 ಧರ್ಮಸ್ಥಳದಲ್ಲಿ ಪದಾಧಿಕಾರಿಗಳ ಸಹಮಿಲನ ಹಾಗೂ ವ್ಯಸನ ಮುಕ್ತರ ಕುಟುಂಬೋತ್ಸವ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya
error: Content is protected !!