July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

ಬಜಿರೆ: ಜಾಗದ ಪಾಲಿನ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.25ರಂದು ವರದಿಯಾಗಿದೆ.


ಬಜಿರೆ ಗ್ರಾಮದ ಪದ್ಮನಿಲಯ ನಿವಾಸಿ ರತ್ನರಾಜ್ ಪಡಿವಾಳ್ ಅವರು ನೀಡಿರುವ ದೂರಿನಲ್ಲಿ ಡಿ.25 ರಂದು ಮಧ್ಯಾಹ್ನ ತಾನು ಬಜೆರೆ ಗ್ರಾಮದ ಬಾಡಾರು ತೋಟದಲ್ಲಿ ದನಗಳನ್ನು ಮೇಯಿಸುತ್ತಿರುವ ಸಮಯ 4ಮಂದಿ ಅವರು ಅಕ್ರಮವಾಗಿ ತನ್ನನ್ನು ತಡೆದು ನಿಲ್ಲಿಸಿ ಅವಾಚ್ಯಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದಾರೆ. ಹಲ್ಲೆಗೆ ಒಳಗಾದ ಅವರು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.


ಇನ್ನೊಂದು ಕುಟುಂಬದ ಸ್ವರಾಜ್ ಜೈನ್ ಅವರು ನೀಡಿರುವ ದೂರಿನಲ್ಲಿ ತಮಗೆ ಜಮೀನಿನ ಪಾಲಿನ ವಿಚಾರದಲ್ಲಿ ತಕರಾರು ಆಗಿ ಮನಸ್ತಾಪವಿದ್ದು, ಡಿ.25 ರಂದು ಮಧ್ಯಾಹ್ನ ತಾನು ತನ್ನ ತಾಯಿ ಹಾಗೂ ಅತ್ತೆಯ ಮಗ ಮತ್ತು ಪತ್ನಿಯೊಂದಿಗೆ ಬೆಂಗಳೂರಿನಿಂದ ತನ್ನ ಮನೆ ಬಜಿರೆ ಗ್ರಾಮದ ಬಾಡಾರು ಬಂದು ಮನೆಯಲ್ಲಿ ಕರೆಂಟ್ ಇಲ್ಲ ಎಂದು ವಿದ್ಯುತ್ ಮೀಟರ್ ಬೋರ್ಡು ಬಳಿ ಪ್ಯೂಸ್ ಹಾಕಲು ಹೋಗುವ ಸಮಯ ರತ್ನರಾಜ ಪಡಿವಾಲ್ ತನಗೆ ಅವಾಚ್ಯ ಶಬ್ದಗಳಿಂದ ಬೈದು ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದು ಕೋಲಿನಿಂದ ಹಲ್ಲೆ ನಡೆಸಿದ್ದು, ಗಲಾಟೆ ಬಿಡಿಸಲು ಹೋದ ತನ್ನ ತಾಯಿಯನ್ನು ದೂಡಿ ಹಾಕಿ, ತನಗೆ ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಎರಡು ಕಡೆಯ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಲಾಗಿದೆ.

Related posts

ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಚುನಾವಣಾ ಪ್ರಭಾರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಪಾಲೇದು ಪರಿಸರದಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಗಸ್ತು

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!