30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

ಬಜಿರೆ: ಜಾಗದ ಪಾಲಿನ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.25ರಂದು ವರದಿಯಾಗಿದೆ.


ಬಜಿರೆ ಗ್ರಾಮದ ಪದ್ಮನಿಲಯ ನಿವಾಸಿ ರತ್ನರಾಜ್ ಪಡಿವಾಳ್ ಅವರು ನೀಡಿರುವ ದೂರಿನಲ್ಲಿ ಡಿ.25 ರಂದು ಮಧ್ಯಾಹ್ನ ತಾನು ಬಜೆರೆ ಗ್ರಾಮದ ಬಾಡಾರು ತೋಟದಲ್ಲಿ ದನಗಳನ್ನು ಮೇಯಿಸುತ್ತಿರುವ ಸಮಯ 4ಮಂದಿ ಅವರು ಅಕ್ರಮವಾಗಿ ತನ್ನನ್ನು ತಡೆದು ನಿಲ್ಲಿಸಿ ಅವಾಚ್ಯಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದಾರೆ. ಹಲ್ಲೆಗೆ ಒಳಗಾದ ಅವರು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.


ಇನ್ನೊಂದು ಕುಟುಂಬದ ಸ್ವರಾಜ್ ಜೈನ್ ಅವರು ನೀಡಿರುವ ದೂರಿನಲ್ಲಿ ತಮಗೆ ಜಮೀನಿನ ಪಾಲಿನ ವಿಚಾರದಲ್ಲಿ ತಕರಾರು ಆಗಿ ಮನಸ್ತಾಪವಿದ್ದು, ಡಿ.25 ರಂದು ಮಧ್ಯಾಹ್ನ ತಾನು ತನ್ನ ತಾಯಿ ಹಾಗೂ ಅತ್ತೆಯ ಮಗ ಮತ್ತು ಪತ್ನಿಯೊಂದಿಗೆ ಬೆಂಗಳೂರಿನಿಂದ ತನ್ನ ಮನೆ ಬಜಿರೆ ಗ್ರಾಮದ ಬಾಡಾರು ಬಂದು ಮನೆಯಲ್ಲಿ ಕರೆಂಟ್ ಇಲ್ಲ ಎಂದು ವಿದ್ಯುತ್ ಮೀಟರ್ ಬೋರ್ಡು ಬಳಿ ಪ್ಯೂಸ್ ಹಾಕಲು ಹೋಗುವ ಸಮಯ ರತ್ನರಾಜ ಪಡಿವಾಲ್ ತನಗೆ ಅವಾಚ್ಯ ಶಬ್ದಗಳಿಂದ ಬೈದು ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದು ಕೋಲಿನಿಂದ ಹಲ್ಲೆ ನಡೆಸಿದ್ದು, ಗಲಾಟೆ ಬಿಡಿಸಲು ಹೋದ ತನ್ನ ತಾಯಿಯನ್ನು ದೂಡಿ ಹಾಕಿ, ತನಗೆ ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಎರಡು ಕಡೆಯ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಲಾಗಿದೆ.

Related posts

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಜ.7: ತಣ್ಣೀರುಪಂತ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya
error: Content is protected !!