25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

ಬಜಿರೆ: ಜಾಗದ ಪಾಲಿನ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.25ರಂದು ವರದಿಯಾಗಿದೆ.


ಬಜಿರೆ ಗ್ರಾಮದ ಪದ್ಮನಿಲಯ ನಿವಾಸಿ ರತ್ನರಾಜ್ ಪಡಿವಾಳ್ ಅವರು ನೀಡಿರುವ ದೂರಿನಲ್ಲಿ ಡಿ.25 ರಂದು ಮಧ್ಯಾಹ್ನ ತಾನು ಬಜೆರೆ ಗ್ರಾಮದ ಬಾಡಾರು ತೋಟದಲ್ಲಿ ದನಗಳನ್ನು ಮೇಯಿಸುತ್ತಿರುವ ಸಮಯ 4ಮಂದಿ ಅವರು ಅಕ್ರಮವಾಗಿ ತನ್ನನ್ನು ತಡೆದು ನಿಲ್ಲಿಸಿ ಅವಾಚ್ಯಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದಾರೆ. ಹಲ್ಲೆಗೆ ಒಳಗಾದ ಅವರು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.


ಇನ್ನೊಂದು ಕುಟುಂಬದ ಸ್ವರಾಜ್ ಜೈನ್ ಅವರು ನೀಡಿರುವ ದೂರಿನಲ್ಲಿ ತಮಗೆ ಜಮೀನಿನ ಪಾಲಿನ ವಿಚಾರದಲ್ಲಿ ತಕರಾರು ಆಗಿ ಮನಸ್ತಾಪವಿದ್ದು, ಡಿ.25 ರಂದು ಮಧ್ಯಾಹ್ನ ತಾನು ತನ್ನ ತಾಯಿ ಹಾಗೂ ಅತ್ತೆಯ ಮಗ ಮತ್ತು ಪತ್ನಿಯೊಂದಿಗೆ ಬೆಂಗಳೂರಿನಿಂದ ತನ್ನ ಮನೆ ಬಜಿರೆ ಗ್ರಾಮದ ಬಾಡಾರು ಬಂದು ಮನೆಯಲ್ಲಿ ಕರೆಂಟ್ ಇಲ್ಲ ಎಂದು ವಿದ್ಯುತ್ ಮೀಟರ್ ಬೋರ್ಡು ಬಳಿ ಪ್ಯೂಸ್ ಹಾಕಲು ಹೋಗುವ ಸಮಯ ರತ್ನರಾಜ ಪಡಿವಾಲ್ ತನಗೆ ಅವಾಚ್ಯ ಶಬ್ದಗಳಿಂದ ಬೈದು ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದು ಕೋಲಿನಿಂದ ಹಲ್ಲೆ ನಡೆಸಿದ್ದು, ಗಲಾಟೆ ಬಿಡಿಸಲು ಹೋದ ತನ್ನ ತಾಯಿಯನ್ನು ದೂಡಿ ಹಾಕಿ, ತನಗೆ ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಎರಡು ಕಡೆಯ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಲಾಗಿದೆ.

Related posts

ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಅರಸಿನಮಕ್ಕಿ: ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 2023ನೇ ವರ್ಷದ ಚಟುವಟಿಕೆಗಳು ಸಂಪನ್ನ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya
error: Content is protected !!