ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

ಬಜಿರೆ: ಜಾಗದ ಪಾಲಿನ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.25ರಂದು ವರದಿಯಾಗಿದೆ.


ಬಜಿರೆ ಗ್ರಾಮದ ಪದ್ಮನಿಲಯ ನಿವಾಸಿ ರತ್ನರಾಜ್ ಪಡಿವಾಳ್ ಅವರು ನೀಡಿರುವ ದೂರಿನಲ್ಲಿ ಡಿ.25 ರಂದು ಮಧ್ಯಾಹ್ನ ತಾನು ಬಜೆರೆ ಗ್ರಾಮದ ಬಾಡಾರು ತೋಟದಲ್ಲಿ ದನಗಳನ್ನು ಮೇಯಿಸುತ್ತಿರುವ ಸಮಯ 4ಮಂದಿ ಅವರು ಅಕ್ರಮವಾಗಿ ತನ್ನನ್ನು ತಡೆದು ನಿಲ್ಲಿಸಿ ಅವಾಚ್ಯಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದಾರೆ. ಹಲ್ಲೆಗೆ ಒಳಗಾದ ಅವರು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.


ಇನ್ನೊಂದು ಕುಟುಂಬದ ಸ್ವರಾಜ್ ಜೈನ್ ಅವರು ನೀಡಿರುವ ದೂರಿನಲ್ಲಿ ತಮಗೆ ಜಮೀನಿನ ಪಾಲಿನ ವಿಚಾರದಲ್ಲಿ ತಕರಾರು ಆಗಿ ಮನಸ್ತಾಪವಿದ್ದು, ಡಿ.25 ರಂದು ಮಧ್ಯಾಹ್ನ ತಾನು ತನ್ನ ತಾಯಿ ಹಾಗೂ ಅತ್ತೆಯ ಮಗ ಮತ್ತು ಪತ್ನಿಯೊಂದಿಗೆ ಬೆಂಗಳೂರಿನಿಂದ ತನ್ನ ಮನೆ ಬಜಿರೆ ಗ್ರಾಮದ ಬಾಡಾರು ಬಂದು ಮನೆಯಲ್ಲಿ ಕರೆಂಟ್ ಇಲ್ಲ ಎಂದು ವಿದ್ಯುತ್ ಮೀಟರ್ ಬೋರ್ಡು ಬಳಿ ಪ್ಯೂಸ್ ಹಾಕಲು ಹೋಗುವ ಸಮಯ ರತ್ನರಾಜ ಪಡಿವಾಲ್ ತನಗೆ ಅವಾಚ್ಯ ಶಬ್ದಗಳಿಂದ ಬೈದು ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದು ಕೋಲಿನಿಂದ ಹಲ್ಲೆ ನಡೆಸಿದ್ದು, ಗಲಾಟೆ ಬಿಡಿಸಲು ಹೋದ ತನ್ನ ತಾಯಿಯನ್ನು ದೂಡಿ ಹಾಕಿ, ತನಗೆ ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಎರಡು ಕಡೆಯ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಲಾಗಿದೆ.

Related posts

ಕುಕ್ಕೇಡಿ- ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಡಿಸ್ಕೌಂಟ್ ಆಫರ್

Suddi Udaya
error: Content is protected !!