23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರ ಕಟ್ಟೆ ಶಾಖೆ ಹಾಗೂ ಬದ್ರಿಯಾ ಯಂಗ್’ಮೆನ್ಸ್ ಪೆರಾಲ್ದರಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಪ್ರಸ್ತುತ ಮುಸ್ಲಿಮ್ ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿ ನೆಲೆ ನಿಂತಿರುವ ಮಾದಕ ವ್ಯಸನ ಮತ್ತು ಮದುವೆ ಅನಾಚಾರದ ವಿರುದ್ದ ಜಾಗೃತಿ ಸಭೆ ಡಿ.27 ರಂದು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬಹು ಸಂಶುದ್ದೀನ್ ದಾರಿಮಿ ಪೆರಾಲ್ದರಕಟ್ಟೆ ರವರು ನೆರವೇರಿಸಲಿದ್ದು ಬಹು ಅಬೂಬಕ್ಕರ್ ಸಿದ್ದೀಕ್ ಜಲಾಲಿ, ಖತೀಬರು ಕೇಂದ್ರ ಜುಮಾ ಮಸೀದಿ ಕಕ್ಕಿಂಜೆ ರವರು ಮದುವೆ ಅನಾಚಾರ ಪಿಡುಗಿನ ವಿರುದ್ದ ವಿಷಯ ಮಂಡಣೆಯನ್ನು ಮಾಡಲಿದ್ದಾರೆ ಹಾಗೂ ಡಾ. ರಫೀಕ್ ಮಾಸ್ಟರ್’ ರವರು ಮಾದಕ ವ್ಯಸನ ವಿಷಯದಲ್ಲಿ ಪ್ರೇರಣಾ ಭಾಷಣವನ್ನು ಮಾಡಲಿದ್ದಾರೆ.


ವೇಣೂರು ಠಾಣಾ ಸಬ್ ಇನ್ಸ್’ಪೆಕ್ಟರ್ ಶ್ರೀಶೈಲಾ ಮುರಗೋಡು, ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಇದರ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ಮತ್ತು ಸ್ಯಳೀಯ ಜಮಾತ್ ಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಪ್ರಧಾನ ಕಾರ್ಯದರ್ಶಿ ಸಾಧಿಕ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪಾಲಕಾರೊಂದಿಗೆ ಸಂವಾದ ಕಾರ್ಯಕ್ರಮ

Suddi Udaya

ಕೊಕ್ಕಡ: ಹೊನ್ನಮ್ಮ ಮನೆ ನಿರ್ಮಾಣಕ್ಕೆ ನೆರವು

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಮುಳಿಯ ಜ್ಯುವೆಲ್ಸ್‌ ನಲ್ಲಿ ಸಂಸ್ಥಾಪಕರ ದಿನಾಚರಣೆ: ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ 78 ವರ್ಷ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya
error: Content is protected !!