25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

ಕಾಜೂರು : ದರ್ಸ್ ರಂಗದಲ್ಲಿ ನಾಲ್ಕು ದಶಕ ಪೂರೈಸಿದ ಅಸ್ಸಯ್ಯಿದ್ ಹಸನುಲ್ ಅಹ್ದಲ್ ತಂಙಳ್ ರವರಿಗೆ ಶಿಷ್ಯಂದಿರು ನೀಡುವ ‘ಅತ್ತಕ್‌ರೀಮ್’ ಗೌರವಾರ್ಪಣೆಯ ಪ್ರಚಾರಾರ್ಥ ಮದನೀಯಂ ಅಬ್ದುಲ್ಲತೀಫ್ ಸಖಾಫಿ ಮುನ್ನಡೆಸುವ ‘ಸಫರೇ ತಕ್‌ರೀಮ್’ ಗೆ ಕಾಜೂರು ದರ್ಗಾ ವಠಾರದಲ್ಲಿ ಚಾಲನೆ ನೀಡಲಾಯಿತು.

ಕಾಜೂರು ಮುದರ್ರಿಸ್ ತೌಸೀಫ್ ಸ‌ಅದಿ ಹರೇಕಳ ಝಿಯಾರತ್ ನೇತೃತ್ವ ನೀಡಿದರು. ನಂತರ ಮಾತನಾಡಿದ ಅಬ್ದುಲ್ಲತೀಫ್ ಸಖಾಫಿ, ಹಸನುಲ್ ಅಹ್ದಲ್ ತಂಙಳರವರು ಸೇವಾ ಬದುಕಿಗೆ ಕಾಲಿಟ್ಟದ್ದು ಈ ಕಾಜೂರಿನಿಂದಲೇ. ಆ ಕಾರಣದಿಂದಲೇ ಈ ಯಾತ್ರೆಗೆ ಕಾಜೂರನ್ನೇ ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮದ ಯಶಸ್ವಿಗೆ ನಿಮ್ಮೆಲ್ಲರ ಸಹಕಾರ ಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ರಹ್ಮಾನಿಯಾ ಜುಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಧ್ಯಕ್ಷ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಜೆ.ಎಚ್, ಕೋಶಾಧಿಕಾರಿ ಕಮಾಲ್ ರವರ ನೇತೃತ್ವದಲ್ಲಿ ಅಬ್ದುಲ್ಲತೀಫ್ ಸಖಾಫಿಯನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಜೂರು ಆಡಳಿತ ಸಮಿತಿ ಮಾಜಿ ಕೋಶಾಧಿಕಾರಿ ಅಬ್ಬಾಸ್ ಜೆ.ಎಚ್, ಆಡಳಿತ ಮಂಡಳಿ ಸದಸ್ಯರಾದ ಸಿದ್ದೀಕ್ ಕೆ.ಎಚ್, ಎಸ್‌ವೈಎಸ್ ಕಾಜೂರು ಯುನಿಟ್ ಅಧ್ಯಕ್ಷ ಹೈದರಲಿ ಕಾಜೂರು, ಎಸ್ಸೆಸ್ಸೆಎಫ್ ಕಾಜೂರು ಸೆಕ್ಟರ್ ಅಧ್ಯಕ್ಷ ನಿಝಾಮುದ್ದೀನ್ ಜೆ.ಎಚ್, ಎಸ್ಸೆಸ್ಸೆಎಫ್ ಕಾಜೂರು ಯೂನಿಟ್ ಅಧ್ಯಕ್ಷ ಜಬ್ಬಾರ್ ಕಾಜೂರು ಮುಂತಾದವರು ಉಪಸ್ಥಿತರಿದ್ದರು.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya
error: Content is protected !!