25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

ಕಾಜೂರು : ದರ್ಸ್ ರಂಗದಲ್ಲಿ ನಾಲ್ಕು ದಶಕ ಪೂರೈಸಿದ ಅಸ್ಸಯ್ಯಿದ್ ಹಸನುಲ್ ಅಹ್ದಲ್ ತಂಙಳ್ ರವರಿಗೆ ಶಿಷ್ಯಂದಿರು ನೀಡುವ ‘ಅತ್ತಕ್‌ರೀಮ್’ ಗೌರವಾರ್ಪಣೆಯ ಪ್ರಚಾರಾರ್ಥ ಮದನೀಯಂ ಅಬ್ದುಲ್ಲತೀಫ್ ಸಖಾಫಿ ಮುನ್ನಡೆಸುವ ‘ಸಫರೇ ತಕ್‌ರೀಮ್’ ಗೆ ಕಾಜೂರು ದರ್ಗಾ ವಠಾರದಲ್ಲಿ ಚಾಲನೆ ನೀಡಲಾಯಿತು.

ಕಾಜೂರು ಮುದರ್ರಿಸ್ ತೌಸೀಫ್ ಸ‌ಅದಿ ಹರೇಕಳ ಝಿಯಾರತ್ ನೇತೃತ್ವ ನೀಡಿದರು. ನಂತರ ಮಾತನಾಡಿದ ಅಬ್ದುಲ್ಲತೀಫ್ ಸಖಾಫಿ, ಹಸನುಲ್ ಅಹ್ದಲ್ ತಂಙಳರವರು ಸೇವಾ ಬದುಕಿಗೆ ಕಾಲಿಟ್ಟದ್ದು ಈ ಕಾಜೂರಿನಿಂದಲೇ. ಆ ಕಾರಣದಿಂದಲೇ ಈ ಯಾತ್ರೆಗೆ ಕಾಜೂರನ್ನೇ ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮದ ಯಶಸ್ವಿಗೆ ನಿಮ್ಮೆಲ್ಲರ ಸಹಕಾರ ಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ರಹ್ಮಾನಿಯಾ ಜುಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಧ್ಯಕ್ಷ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಜೆ.ಎಚ್, ಕೋಶಾಧಿಕಾರಿ ಕಮಾಲ್ ರವರ ನೇತೃತ್ವದಲ್ಲಿ ಅಬ್ದುಲ್ಲತೀಫ್ ಸಖಾಫಿಯನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಜೂರು ಆಡಳಿತ ಸಮಿತಿ ಮಾಜಿ ಕೋಶಾಧಿಕಾರಿ ಅಬ್ಬಾಸ್ ಜೆ.ಎಚ್, ಆಡಳಿತ ಮಂಡಳಿ ಸದಸ್ಯರಾದ ಸಿದ್ದೀಕ್ ಕೆ.ಎಚ್, ಎಸ್‌ವೈಎಸ್ ಕಾಜೂರು ಯುನಿಟ್ ಅಧ್ಯಕ್ಷ ಹೈದರಲಿ ಕಾಜೂರು, ಎಸ್ಸೆಸ್ಸೆಎಫ್ ಕಾಜೂರು ಸೆಕ್ಟರ್ ಅಧ್ಯಕ್ಷ ನಿಝಾಮುದ್ದೀನ್ ಜೆ.ಎಚ್, ಎಸ್ಸೆಸ್ಸೆಎಫ್ ಕಾಜೂರು ಯೂನಿಟ್ ಅಧ್ಯಕ್ಷ ಜಬ್ಬಾರ್ ಕಾಜೂರು ಮುಂತಾದವರು ಉಪಸ್ಥಿತರಿದ್ದರು.

Related posts

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಎಂ ನಾರಾಯಣ ಬೇಗೂರ್ ರವರಿಗೆ ಶ್ರೀ ರಾಘವೇಂದ್ರ ಮಠದಲ್ಲಿ ಅಭಿನಂದನೆ

Suddi Udaya

ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಸಹಾಯ ಧನ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya
error: Content is protected !!