September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

ಕಾಜೂರು : ದರ್ಸ್ ರಂಗದಲ್ಲಿ ನಾಲ್ಕು ದಶಕ ಪೂರೈಸಿದ ಅಸ್ಸಯ್ಯಿದ್ ಹಸನುಲ್ ಅಹ್ದಲ್ ತಂಙಳ್ ರವರಿಗೆ ಶಿಷ್ಯಂದಿರು ನೀಡುವ ‘ಅತ್ತಕ್‌ರೀಮ್’ ಗೌರವಾರ್ಪಣೆಯ ಪ್ರಚಾರಾರ್ಥ ಮದನೀಯಂ ಅಬ್ದುಲ್ಲತೀಫ್ ಸಖಾಫಿ ಮುನ್ನಡೆಸುವ ‘ಸಫರೇ ತಕ್‌ರೀಮ್’ ಗೆ ಕಾಜೂರು ದರ್ಗಾ ವಠಾರದಲ್ಲಿ ಚಾಲನೆ ನೀಡಲಾಯಿತು.

ಕಾಜೂರು ಮುದರ್ರಿಸ್ ತೌಸೀಫ್ ಸ‌ಅದಿ ಹರೇಕಳ ಝಿಯಾರತ್ ನೇತೃತ್ವ ನೀಡಿದರು. ನಂತರ ಮಾತನಾಡಿದ ಅಬ್ದುಲ್ಲತೀಫ್ ಸಖಾಫಿ, ಹಸನುಲ್ ಅಹ್ದಲ್ ತಂಙಳರವರು ಸೇವಾ ಬದುಕಿಗೆ ಕಾಲಿಟ್ಟದ್ದು ಈ ಕಾಜೂರಿನಿಂದಲೇ. ಆ ಕಾರಣದಿಂದಲೇ ಈ ಯಾತ್ರೆಗೆ ಕಾಜೂರನ್ನೇ ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮದ ಯಶಸ್ವಿಗೆ ನಿಮ್ಮೆಲ್ಲರ ಸಹಕಾರ ಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ರಹ್ಮಾನಿಯಾ ಜುಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಧ್ಯಕ್ಷ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಜೆ.ಎಚ್, ಕೋಶಾಧಿಕಾರಿ ಕಮಾಲ್ ರವರ ನೇತೃತ್ವದಲ್ಲಿ ಅಬ್ದುಲ್ಲತೀಫ್ ಸಖಾಫಿಯನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಜೂರು ಆಡಳಿತ ಸಮಿತಿ ಮಾಜಿ ಕೋಶಾಧಿಕಾರಿ ಅಬ್ಬಾಸ್ ಜೆ.ಎಚ್, ಆಡಳಿತ ಮಂಡಳಿ ಸದಸ್ಯರಾದ ಸಿದ್ದೀಕ್ ಕೆ.ಎಚ್, ಎಸ್‌ವೈಎಸ್ ಕಾಜೂರು ಯುನಿಟ್ ಅಧ್ಯಕ್ಷ ಹೈದರಲಿ ಕಾಜೂರು, ಎಸ್ಸೆಸ್ಸೆಎಫ್ ಕಾಜೂರು ಸೆಕ್ಟರ್ ಅಧ್ಯಕ್ಷ ನಿಝಾಮುದ್ದೀನ್ ಜೆ.ಎಚ್, ಎಸ್ಸೆಸ್ಸೆಎಫ್ ಕಾಜೂರು ಯೂನಿಟ್ ಅಧ್ಯಕ್ಷ ಜಬ್ಬಾರ್ ಕಾಜೂರು ಮುಂತಾದವರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ಉಜಿರೆಯಲ್ಲಿ ಸಂವಿಧಾನ ರಕ್ಷಣೆ ಹಾಗೂ ಅಂಬೇಡ್ಕ‌ರ್ ಭವನ ನಿರ್ಮಾಣಕ್ಕಾಗಿ ಸಂಘಟಿತ ಹೋರಾಟಕ್ಕೆ ಕರೆ: ನೂತನ ಸಮಿತಿ ರಚನೆ

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya
error: Content is protected !!