38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

ನಿಡ್ಲೆ: ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮವು ಡಿ.27 ಮತ್ತು 28ರಂದು ನಡೆಯಲಿದೆ.


ಡಿ.27ರಂದು ಬೆಳಿಗ್ಗೆ ಬರೆಂಗಾಯ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ, ಮಂಗಳೂರು ಉದ್ಯಮಿಗಳಾದ ರಮೇಶ್ ರಾವ್ ಕೊಡಂಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಅಮೃತ ಮಹೋತ್ಸವದ ಸವಿನೆನಪಿಗಾಗಿ ದಿ| ಅನಂತ ಪದ್ಮನಾಭಯ್ಯ ಪಾಂಡೀಲು ಇವರ ಕುಟುಂಬಸ್ಥರು ನೀಡಿದ ನೂತನ ಕೊಠಡಿಯ ಉದ್ಘಾಟನಾ ಸಮಾರಂಭದ ಉದ್ಘಾಟನೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ನೆರವೇರಿಸಲಿದ್ದಾರೆ.

ನಂತರ ಸಭಾ ಕಾರ್ಯಕ್ರಮ ಜರುಗಲಿದ್ದು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಾಗೂ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ ಗೌರವಾರ್ಪಣೆ ನಡೆಯಲಿದೆ. ಸಂಜೆ ನಡೆಯುವ ಸಭಾ ಕಾರ್ಯಕ್ರವದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರುಗಳಿಗೆ, ಪ್ರಸ್ತುತ ಸೇವೆ ಸಲ್ಲಿಸುತ್ತಿರುವ ಶಿಕ್ಷಕರುಗಳಿಗೆ ಗೌರವಾರ್ಪಣೆ ನಡೆಯಲಿದೆ. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಪುಟಾಣಿಗಳು ಹಾಗೂ ಶಾಲಾ ಮಕ್ಕಳಿಂದ ವಿವಿಧ ವಿನೋದಾವಳಿಗಳು ಹಾಗೂ ಸುದರ್ಶನ ವಿಜಯ ಮತ್ತು ನರಕಾಸುರ ಮೋಕ್ಷ ಯಕ್ಷಗಾನ ಬಯಲಾಟ ನಡೆಯಲಿದೆ.

ಡಿ.28ರಂದು ಬೆಳಿಗ್ಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶಾಲಾ ಮಕ್ಕಳಿಗೆ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ನಂತರ ಶಾಲಾ ಮಕ್ಕಳಿಗೆ ಹಾಗೂ ಊರವರಿಗೆ ಛದ್ಮವೇಷ ಕಾರ್ಯಕ್ರಮ ನಡೆಯಲಿದೆ. ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಶಾಲೆಯಲ್ಲಿ ಅಮೂಲ್ಯ ಸೇವೆ ಸಲ್ಲಿಸಿದ ಎಸ್‌ಡಿಎಂ ಅಧ್ಯಕ್ಷರುಗಳಿಗೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರುಗಳಿಗೆ, ಈ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ ಸರಕಾರಿ ಸೇವೆ ಪಡೆದುಕೊಂಡ ಹಿರಿಯ ವಿದ್ಯಾರ್ಥಿಗಳಿಗೆ, ಕ್ರೀಡೆ ಮತ್ತು ಶೈಕ್ಷಣಿಕವಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಹಿರಿಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ನಡೆಯಲಿದೆ. ರಾತ್ರಿ ಅಂಗನವಾಡಿ ಪುಟಾಣಿಗಳು ಶಾಲಾ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ನೃತ್ಯಗಳು ಹಾಗೂ ಮಹಿಳಾ ಹಿರಿಯ ವಿದ್ಯಾರ್ಥಿಗಳಿಂದ “ಆರ್ ಬುಡಯೆರ್” ತುಳು ಹಾಸ್ಯಮಯ ನಾಟಕ ನಡೆಯಲಿದೆ.

ಕಾರ್ಯಕ್ರಮದ ನೇರಪ್ರಸಾರವನ್ನು ಸುದ್ದಿ ಉದಯ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗುವುದು.

Related posts

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya
error: Content is protected !!