April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

ಬಜಿರೆ: ಜಾಗದ ಪಾಲಿನ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.25ರಂದು ವರದಿಯಾಗಿದೆ.


ಬಜಿರೆ ಗ್ರಾಮದ ಪದ್ಮನಿಲಯ ನಿವಾಸಿ ರತ್ನರಾಜ್ ಪಡಿವಾಳ್ ಅವರು ನೀಡಿರುವ ದೂರಿನಲ್ಲಿ ಡಿ.25 ರಂದು ಮಧ್ಯಾಹ್ನ ತಾನು ಬಜೆರೆ ಗ್ರಾಮದ ಬಾಡಾರು ತೋಟದಲ್ಲಿ ದನಗಳನ್ನು ಮೇಯಿಸುತ್ತಿರುವ ಸಮಯ 4ಮಂದಿ ಅವರು ಅಕ್ರಮವಾಗಿ ತನ್ನನ್ನು ತಡೆದು ನಿಲ್ಲಿಸಿ ಅವಾಚ್ಯಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದಾರೆ. ಹಲ್ಲೆಗೆ ಒಳಗಾದ ಅವರು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.


ಇನ್ನೊಂದು ಕುಟುಂಬದ ಸ್ವರಾಜ್ ಜೈನ್ ಅವರು ನೀಡಿರುವ ದೂರಿನಲ್ಲಿ ತಮಗೆ ಜಮೀನಿನ ಪಾಲಿನ ವಿಚಾರದಲ್ಲಿ ತಕರಾರು ಆಗಿ ಮನಸ್ತಾಪವಿದ್ದು, ಡಿ.25 ರಂದು ಮಧ್ಯಾಹ್ನ ತಾನು ತನ್ನ ತಾಯಿ ಹಾಗೂ ಅತ್ತೆಯ ಮಗ ಮತ್ತು ಪತ್ನಿಯೊಂದಿಗೆ ಬೆಂಗಳೂರಿನಿಂದ ತನ್ನ ಮನೆ ಬಜಿರೆ ಗ್ರಾಮದ ಬಾಡಾರು ಬಂದು ಮನೆಯಲ್ಲಿ ಕರೆಂಟ್ ಇಲ್ಲ ಎಂದು ವಿದ್ಯುತ್ ಮೀಟರ್ ಬೋರ್ಡು ಬಳಿ ಪ್ಯೂಸ್ ಹಾಕಲು ಹೋಗುವ ಸಮಯ ರತ್ನರಾಜ ಪಡಿವಾಲ್ ತನಗೆ ಅವಾಚ್ಯ ಶಬ್ದಗಳಿಂದ ಬೈದು ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದು ಕೋಲಿನಿಂದ ಹಲ್ಲೆ ನಡೆಸಿದ್ದು, ಗಲಾಟೆ ಬಿಡಿಸಲು ಹೋದ ತನ್ನ ತಾಯಿಯನ್ನು ದೂಡಿ ಹಾಕಿ, ತನಗೆ ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಎರಡು ಕಡೆಯ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಲಾಗಿದೆ.

Related posts

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya
error: Content is protected !!