September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

ಬಜಿರೆ: ಜಾಗದ ಪಾಲಿನ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.25ರಂದು ವರದಿಯಾಗಿದೆ.


ಬಜಿರೆ ಗ್ರಾಮದ ಪದ್ಮನಿಲಯ ನಿವಾಸಿ ರತ್ನರಾಜ್ ಪಡಿವಾಳ್ ಅವರು ನೀಡಿರುವ ದೂರಿನಲ್ಲಿ ಡಿ.25 ರಂದು ಮಧ್ಯಾಹ್ನ ತಾನು ಬಜೆರೆ ಗ್ರಾಮದ ಬಾಡಾರು ತೋಟದಲ್ಲಿ ದನಗಳನ್ನು ಮೇಯಿಸುತ್ತಿರುವ ಸಮಯ 4ಮಂದಿ ಅವರು ಅಕ್ರಮವಾಗಿ ತನ್ನನ್ನು ತಡೆದು ನಿಲ್ಲಿಸಿ ಅವಾಚ್ಯಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದಾರೆ. ಹಲ್ಲೆಗೆ ಒಳಗಾದ ಅವರು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.


ಇನ್ನೊಂದು ಕುಟುಂಬದ ಸ್ವರಾಜ್ ಜೈನ್ ಅವರು ನೀಡಿರುವ ದೂರಿನಲ್ಲಿ ತಮಗೆ ಜಮೀನಿನ ಪಾಲಿನ ವಿಚಾರದಲ್ಲಿ ತಕರಾರು ಆಗಿ ಮನಸ್ತಾಪವಿದ್ದು, ಡಿ.25 ರಂದು ಮಧ್ಯಾಹ್ನ ತಾನು ತನ್ನ ತಾಯಿ ಹಾಗೂ ಅತ್ತೆಯ ಮಗ ಮತ್ತು ಪತ್ನಿಯೊಂದಿಗೆ ಬೆಂಗಳೂರಿನಿಂದ ತನ್ನ ಮನೆ ಬಜಿರೆ ಗ್ರಾಮದ ಬಾಡಾರು ಬಂದು ಮನೆಯಲ್ಲಿ ಕರೆಂಟ್ ಇಲ್ಲ ಎಂದು ವಿದ್ಯುತ್ ಮೀಟರ್ ಬೋರ್ಡು ಬಳಿ ಪ್ಯೂಸ್ ಹಾಕಲು ಹೋಗುವ ಸಮಯ ರತ್ನರಾಜ ಪಡಿವಾಲ್ ತನಗೆ ಅವಾಚ್ಯ ಶಬ್ದಗಳಿಂದ ಬೈದು ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದು ಕೋಲಿನಿಂದ ಹಲ್ಲೆ ನಡೆಸಿದ್ದು, ಗಲಾಟೆ ಬಿಡಿಸಲು ಹೋದ ತನ್ನ ತಾಯಿಯನ್ನು ದೂಡಿ ಹಾಕಿ, ತನಗೆ ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಎರಡು ಕಡೆಯ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಲಾಗಿದೆ.

Related posts

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya
error: Content is protected !!