24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿ. 25 ರಂದು ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ ಜರುಗಿತು.

ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಉದಿತ್ ಕುಮಾರ್ ಜೈನ್ ವಹಿಸಿಕೊಂಡಿದ್ದರು. ಧಾರ್ಮಿಕ ಭಾಷಣಕಾರರಾಗಿ ಆಗಮಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಧರ್ಮದ ಬಗ್ಗೆ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷಿ ಇಂಡಸ್ಟ್ರೀಸ್ ನ ಮಾಲಕರಾದ ಮೋಹನ್ ಕುಮಾರ್ ಸಮಾಯೋಚಿತವಾಗಿ ಮಾತನಾಡಿದರು, ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೀವಂಧರ್ ಕುಮಾರ್ ಜೈನ್, ಆಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಗೌಡ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಮಮತಾ ದಿನೇಶ್ ಪೂಜಾರಿ, ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ನವೀನ್ ಗೌಡ ಕಂಬಳದಡ್ಡ ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ದುರ್ಗಾಪ್ರಸಾದ್ ಕೇರ್ಮುನ್ನಾಯ ಸ್ವಾಗತಿಸಿ, ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ ವಂದಿಸಿದರು. ಗಿರೀಶ್ ಕುಮಾರ್ ಎಂ ಮತ್ತು ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನಾರಾವಿ ವಲಯದ ಒಕ್ಕೂಟದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಎಸ್.ಡಿ.ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಯಾಂತ್ರಿಕ ಕಾರ್ಯಾಗಾರ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya
error: Content is protected !!