26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ

ಬೆಳಾಲು : ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಡಿ. 25 ರಂದು ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ಪರಿವಾರ ದೈವಗಳ ಸಿರಿಸಿಂಗಾರ ನರ್ತನ ಸೇವೆ ಜರುಗಿತು.

ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಉದಿತ್ ಕುಮಾರ್ ಜೈನ್ ವಹಿಸಿಕೊಂಡಿದ್ದರು. ಧಾರ್ಮಿಕ ಭಾಷಣಕಾರರಾಗಿ ಆಗಮಿಸಿದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಧರ್ಮದ ಬಗ್ಗೆ ಭಾಷಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷಿ ಇಂಡಸ್ಟ್ರೀಸ್ ನ ಮಾಲಕರಾದ ಮೋಹನ್ ಕುಮಾರ್ ಸಮಾಯೋಚಿತವಾಗಿ ಮಾತನಾಡಿದರು, ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಜೀವಂಧರ್ ಕುಮಾರ್ ಜೈನ್, ಆಸ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಶ್ರೀನಿವಾಸ್ ಗೌಡ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಮಮತಾ ದಿನೇಶ್ ಪೂಜಾರಿ, ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ನವೀನ್ ಗೌಡ ಕಂಬಳದಡ್ಡ ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ದುರ್ಗಾಪ್ರಸಾದ್ ಕೇರ್ಮುನ್ನಾಯ ಸ್ವಾಗತಿಸಿ, ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಹೇಮಲತಾ ಶ್ರೀನಿವಾಸ್ ಗೌಡ ವಂದಿಸಿದರು. ಗಿರೀಶ್ ಕುಮಾರ್ ಎಂ ಮತ್ತು ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಕಾರ್ಯಕ್ರಮ ನಿರೂಪಿಸಿದರು.

Related posts

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya

ಬಸದಿಗಳಿಗೆ ಅನುದಾನ : ಸವಣಾಲು ಕ್ಷೇತ್ರದ ಬಸದಿಯ ಅಭಿವೃದ್ಧಿಗೆ ರೂ.9 ಲಕ್ಷ, ಪುದುವೆಟ್ಟು ಬಸದಿಗೆ ರೂ.50 ಲಕ್ಷ ಬಿಡುಗಡೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!