23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರ ಕಟ್ಟೆ ಶಾಖೆ ಹಾಗೂ ಬದ್ರಿಯಾ ಯಂಗ್’ಮೆನ್ಸ್ ಪೆರಾಲ್ದರಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಪ್ರಸ್ತುತ ಮುಸ್ಲಿಮ್ ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿ ನೆಲೆ ನಿಂತಿರುವ ಮಾದಕ ವ್ಯಸನ ಮತ್ತು ಮದುವೆ ಅನಾಚಾರದ ವಿರುದ್ದ ಜಾಗೃತಿ ಸಭೆ ಡಿ.27 ರಂದು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬಹು ಸಂಶುದ್ದೀನ್ ದಾರಿಮಿ ಪೆರಾಲ್ದರಕಟ್ಟೆ ರವರು ನೆರವೇರಿಸಲಿದ್ದು ಬಹು ಅಬೂಬಕ್ಕರ್ ಸಿದ್ದೀಕ್ ಜಲಾಲಿ, ಖತೀಬರು ಕೇಂದ್ರ ಜುಮಾ ಮಸೀದಿ ಕಕ್ಕಿಂಜೆ ರವರು ಮದುವೆ ಅನಾಚಾರ ಪಿಡುಗಿನ ವಿರುದ್ದ ವಿಷಯ ಮಂಡಣೆಯನ್ನು ಮಾಡಲಿದ್ದಾರೆ ಹಾಗೂ ಡಾ. ರಫೀಕ್ ಮಾಸ್ಟರ್’ ರವರು ಮಾದಕ ವ್ಯಸನ ವಿಷಯದಲ್ಲಿ ಪ್ರೇರಣಾ ಭಾಷಣವನ್ನು ಮಾಡಲಿದ್ದಾರೆ.


ವೇಣೂರು ಠಾಣಾ ಸಬ್ ಇನ್ಸ್’ಪೆಕ್ಟರ್ ಶ್ರೀಶೈಲಾ ಮುರಗೋಡು, ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಇದರ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ಮತ್ತು ಸ್ಯಳೀಯ ಜಮಾತ್ ಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಪ್ರಧಾನ ಕಾರ್ಯದರ್ಶಿ ಸಾಧಿಕ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಮಾರ್ಗ ಮಧ್ಯೆ ಕೈಕೊಡುವ ಕೆ.ಎಸ್.ಆರ್.ಟಿ.ಸಿ : ಒಂದೇ ದಿನದಲ್ಲಿ ಆರು ಕಡೆಗಳಲ್ಲಿ ಕೆಟ್ಟು ನಿಂತ ಸಾರಿಗೆ ಬಸ್

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!