September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರ ಕಟ್ಟೆ ಶಾಖೆ ಹಾಗೂ ಬದ್ರಿಯಾ ಯಂಗ್’ಮೆನ್ಸ್ ಪೆರಾಲ್ದರಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಪ್ರಸ್ತುತ ಮುಸ್ಲಿಮ್ ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿ ನೆಲೆ ನಿಂತಿರುವ ಮಾದಕ ವ್ಯಸನ ಮತ್ತು ಮದುವೆ ಅನಾಚಾರದ ವಿರುದ್ದ ಜಾಗೃತಿ ಸಭೆ ಡಿ.27 ರಂದು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬಹು ಸಂಶುದ್ದೀನ್ ದಾರಿಮಿ ಪೆರಾಲ್ದರಕಟ್ಟೆ ರವರು ನೆರವೇರಿಸಲಿದ್ದು ಬಹು ಅಬೂಬಕ್ಕರ್ ಸಿದ್ದೀಕ್ ಜಲಾಲಿ, ಖತೀಬರು ಕೇಂದ್ರ ಜುಮಾ ಮಸೀದಿ ಕಕ್ಕಿಂಜೆ ರವರು ಮದುವೆ ಅನಾಚಾರ ಪಿಡುಗಿನ ವಿರುದ್ದ ವಿಷಯ ಮಂಡಣೆಯನ್ನು ಮಾಡಲಿದ್ದಾರೆ ಹಾಗೂ ಡಾ. ರಫೀಕ್ ಮಾಸ್ಟರ್’ ರವರು ಮಾದಕ ವ್ಯಸನ ವಿಷಯದಲ್ಲಿ ಪ್ರೇರಣಾ ಭಾಷಣವನ್ನು ಮಾಡಲಿದ್ದಾರೆ.


ವೇಣೂರು ಠಾಣಾ ಸಬ್ ಇನ್ಸ್’ಪೆಕ್ಟರ್ ಶ್ರೀಶೈಲಾ ಮುರಗೋಡು, ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಇದರ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ಮತ್ತು ಸ್ಯಳೀಯ ಜಮಾತ್ ಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಪ್ರಧಾನ ಕಾರ್ಯದರ್ಶಿ ಸಾಧಿಕ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!