April 2, 2025
Uncategorized

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

ನ್ಯಾಯತರ್ಪು: ಡಿ.25. ನ್ಯಾಯತರ್ಪು ರಕೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಇದರ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ಭಜನೋತ್ಸವ ನೆರವೇರಿತು. ಬೆಳಿಗ್ಗೆ ಗಣಹೋಮ, ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರಕೇಶ್ವರಿಪದವು ಭಜನಾ ಮಂಡಳಿಯ ವಠಾರದಲ್ಲಿ ತಾಲೂಕಿನ ಸುಮಾರು 25 ಕ್ಕೂ ಹೆಚ್ಚು ವಿವಿಧ ಭಜನಾ ತಂಡಗಳಿಂದ ಏಕಕಾಲದಲ್ಲಿ ಕುಣಿತ ಭಜನೋತ್ಸವ ಜರುಗಿತು.

ಹಿಂದುತ್ವ ನಾಡಿನ ಜೀವ ನಾಡಿ, ದೇಶದ ಸಂಸ್ಕಾರ ಜೊತೆಯಲ್ಲಿ ಹಿಂದೂ ಸಂಘಟನೆ ಹಾಗೂ ಸಂಸ್ಕೃತಿಯನ್ನು ಗಟ್ಟಿಯಾಗಿಸಲು ಭಜನೆ ಒಂದಾಗಿದೆ. ಭಜನೆಯಿಂದ ಮಾನಸಿಕವಾಗಿ, ದೈಹಿಕವಾಗಿ,ಅಧ್ಯಾತ್ಮಿಕವಾಗಿ ದೇವರನ್ನು ಭಕ್ತಿಯಿಂದ ಒಳಿಸಲು ಭಜನೆಯಿಂದ ಮಾತ್ರ ಸಾಧ್ಯ ಎಂದು ಬೆಂಗಳೂರು ಯುವ ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತಾನಾಡಿದರು.

ವಿವಿಧ ಭಜನಾ ಮಂಡಳಿಗಳ ಸದಸ್ಯರಿಂದ ಏಕಕಾಲದಲ್ಲಿ ಕುಣಿತ ಭಜನೋತ್ಸವ ನಡೆಯಿತು.

ಸಾಧಕರಿಗೆ ಸನ್ಮಾನಿತರು :
ಯುವ ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ಬೆಂಗಳೂರು, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್‌. ಹಾಗೂ ಭಾರತೀಯ ಭೂಸೇನೆಯ ನಿವೃತ್ತ ಸೈನಿಕ ವಿಕ್ರಂ ಜೆ.ಎನ್‌.ವಂಜಾರೆ ಅವರನ್ನು ಸನ್ಮಾನಿಸಿ, ಗೌರವಿಸಿದರು.
ರಾತ್ರಿ ಕಲ್ಲಡ್ಕ ವಿಠಲ ನಾಯಕ್ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಿತು. ಗೌರವಾಧ್ಯಕ್ಷ ರಂಜನ್ ಎಂ.,ಅಧ್ಯಕ್ಷ ವಸಂತ ಗೌಡ ಕೆ,ಉಪಾಧ್ಯಕ್ಷ ರಮೇಶ್ ವಿ,ಕಾರ್ಯದರ್ಶಿ ಯೋಗೀಶ್ ಎಂ,ಜತೆ ಕಾರ್ಯದರ್ಶಿ ವಿನಯ್,ಕೋಶಾಧಿಕಾರಿ,ಸಹ ಅರ್ಚಕ ಶೇಖರ ಗೌಡ ಎಂ,ಪ್ರಧಾನ ಅರ್ಚಕ ಜಗನ್ನಾಥ ವಿ,ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಭಕ್ತಾದಿಗಳು ಭಾಗವಹಿಸಿದರು. ಉಮೇಶ್ ಕೇಲ್ದಡ್ಕ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya
error: Content is protected !!