25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

ನ್ಯಾಯತರ್ಪು: ಡಿ.25. ನ್ಯಾಯತರ್ಪು ರಕೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಇದರ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ಭಜನೋತ್ಸವ ನೆರವೇರಿತು. ಬೆಳಿಗ್ಗೆ ಗಣಹೋಮ, ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರಕೇಶ್ವರಿಪದವು ಭಜನಾ ಮಂಡಳಿಯ ವಠಾರದಲ್ಲಿ ತಾಲೂಕಿನ ಸುಮಾರು 25 ಕ್ಕೂ ಹೆಚ್ಚು ವಿವಿಧ ಭಜನಾ ತಂಡಗಳಿಂದ ಏಕಕಾಲದಲ್ಲಿ ಕುಣಿತ ಭಜನೋತ್ಸವ ಜರುಗಿತು.

ಹಿಂದುತ್ವ ನಾಡಿನ ಜೀವ ನಾಡಿ, ದೇಶದ ಸಂಸ್ಕಾರ ಜೊತೆಯಲ್ಲಿ ಹಿಂದೂ ಸಂಘಟನೆ ಹಾಗೂ ಸಂಸ್ಕೃತಿಯನ್ನು ಗಟ್ಟಿಯಾಗಿಸಲು ಭಜನೆ ಒಂದಾಗಿದೆ. ಭಜನೆಯಿಂದ ಮಾನಸಿಕವಾಗಿ, ದೈಹಿಕವಾಗಿ,ಅಧ್ಯಾತ್ಮಿಕವಾಗಿ ದೇವರನ್ನು ಭಕ್ತಿಯಿಂದ ಒಳಿಸಲು ಭಜನೆಯಿಂದ ಮಾತ್ರ ಸಾಧ್ಯ ಎಂದು ಬೆಂಗಳೂರು ಯುವ ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತಾನಾಡಿದರು.

ವಿವಿಧ ಭಜನಾ ಮಂಡಳಿಗಳ ಸದಸ್ಯರಿಂದ ಏಕಕಾಲದಲ್ಲಿ ಕುಣಿತ ಭಜನೋತ್ಸವ ನಡೆಯಿತು.

ಸಾಧಕರಿಗೆ ಸನ್ಮಾನಿತರು :
ಯುವ ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ಬೆಂಗಳೂರು, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್‌. ಹಾಗೂ ಭಾರತೀಯ ಭೂಸೇನೆಯ ನಿವೃತ್ತ ಸೈನಿಕ ವಿಕ್ರಂ ಜೆ.ಎನ್‌.ವಂಜಾರೆ ಅವರನ್ನು ಸನ್ಮಾನಿಸಿ, ಗೌರವಿಸಿದರು.
ರಾತ್ರಿ ಕಲ್ಲಡ್ಕ ವಿಠಲ ನಾಯಕ್ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಿತು. ಗೌರವಾಧ್ಯಕ್ಷ ರಂಜನ್ ಎಂ.,ಅಧ್ಯಕ್ಷ ವಸಂತ ಗೌಡ ಕೆ,ಉಪಾಧ್ಯಕ್ಷ ರಮೇಶ್ ವಿ,ಕಾರ್ಯದರ್ಶಿ ಯೋಗೀಶ್ ಎಂ,ಜತೆ ಕಾರ್ಯದರ್ಶಿ ವಿನಯ್,ಕೋಶಾಧಿಕಾರಿ,ಸಹ ಅರ್ಚಕ ಶೇಖರ ಗೌಡ ಎಂ,ಪ್ರಧಾನ ಅರ್ಚಕ ಜಗನ್ನಾಥ ವಿ,ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಭಕ್ತಾದಿಗಳು ಭಾಗವಹಿಸಿದರು. ಉಮೇಶ್ ಕೇಲ್ದಡ್ಕ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya
error: Content is protected !!