April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

ಕಾಜೂರು : ದರ್ಸ್ ರಂಗದಲ್ಲಿ ನಾಲ್ಕು ದಶಕ ಪೂರೈಸಿದ ಅಸ್ಸಯ್ಯಿದ್ ಹಸನುಲ್ ಅಹ್ದಲ್ ತಂಙಳ್ ರವರಿಗೆ ಶಿಷ್ಯಂದಿರು ನೀಡುವ ‘ಅತ್ತಕ್‌ರೀಮ್’ ಗೌರವಾರ್ಪಣೆಯ ಪ್ರಚಾರಾರ್ಥ ಮದನೀಯಂ ಅಬ್ದುಲ್ಲತೀಫ್ ಸಖಾಫಿ ಮುನ್ನಡೆಸುವ ‘ಸಫರೇ ತಕ್‌ರೀಮ್’ ಗೆ ಕಾಜೂರು ದರ್ಗಾ ವಠಾರದಲ್ಲಿ ಚಾಲನೆ ನೀಡಲಾಯಿತು.

ಕಾಜೂರು ಮುದರ್ರಿಸ್ ತೌಸೀಫ್ ಸ‌ಅದಿ ಹರೇಕಳ ಝಿಯಾರತ್ ನೇತೃತ್ವ ನೀಡಿದರು. ನಂತರ ಮಾತನಾಡಿದ ಅಬ್ದುಲ್ಲತೀಫ್ ಸಖಾಫಿ, ಹಸನುಲ್ ಅಹ್ದಲ್ ತಂಙಳರವರು ಸೇವಾ ಬದುಕಿಗೆ ಕಾಲಿಟ್ಟದ್ದು ಈ ಕಾಜೂರಿನಿಂದಲೇ. ಆ ಕಾರಣದಿಂದಲೇ ಈ ಯಾತ್ರೆಗೆ ಕಾಜೂರನ್ನೇ ಆಯ್ಕೆ ಮಾಡಲಾಗಿದ್ದು, ಕಾರ್ಯಕ್ರಮದ ಯಶಸ್ವಿಗೆ ನಿಮ್ಮೆಲ್ಲರ ಸಹಕಾರ ಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ರಹ್ಮಾನಿಯಾ ಜುಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಅಧ್ಯಕ್ಷ ಕೆ.ಯು ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಅಬೂಬಕರ್ ಸಿದ್ದೀಕ್ ಜೆ.ಎಚ್, ಕೋಶಾಧಿಕಾರಿ ಕಮಾಲ್ ರವರ ನೇತೃತ್ವದಲ್ಲಿ ಅಬ್ದುಲ್ಲತೀಫ್ ಸಖಾಫಿಯನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಜೂರು ಆಡಳಿತ ಸಮಿತಿ ಮಾಜಿ ಕೋಶಾಧಿಕಾರಿ ಅಬ್ಬಾಸ್ ಜೆ.ಎಚ್, ಆಡಳಿತ ಮಂಡಳಿ ಸದಸ್ಯರಾದ ಸಿದ್ದೀಕ್ ಕೆ.ಎಚ್, ಎಸ್‌ವೈಎಸ್ ಕಾಜೂರು ಯುನಿಟ್ ಅಧ್ಯಕ್ಷ ಹೈದರಲಿ ಕಾಜೂರು, ಎಸ್ಸೆಸ್ಸೆಎಫ್ ಕಾಜೂರು ಸೆಕ್ಟರ್ ಅಧ್ಯಕ್ಷ ನಿಝಾಮುದ್ದೀನ್ ಜೆ.ಎಚ್, ಎಸ್ಸೆಸ್ಸೆಎಫ್ ಕಾಜೂರು ಯೂನಿಟ್ ಅಧ್ಯಕ್ಷ ಜಬ್ಬಾರ್ ಕಾಜೂರು ಮುಂತಾದವರು ಉಪಸ್ಥಿತರಿದ್ದರು.

Related posts

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ಶಾಸಕ ಹರೀಶ್ ಪೂಂಜರವರಿಗೆ ಗೌರವಾರ್ಪಣೆ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya
error: Content is protected !!