24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ‘ಕೆರೆಗೆ’ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಡಿ.26ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಯ ಅವ್ಯವಸ್ಥೆ ಹಾಗೂ ಒತ್ತುವರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದ ಹಿನ್ನಲೆ ಬಿ.ಎಸ್.ಪಾಟೀಲ್ ಅವರು ಕುವೆಟ್ಟು ಪಂಚಾಯತ್ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದ್ದು.‌ಈ ವೇಳೆ ಕೆರೆಯ ಸುತ್ತಮುತ್ತಲಿನ ಪ್ರದೇಶದ ವಾತಾವರಣ ನೋಡಿ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದು. ಕೆರೆಯ ಸುತ್ತ ಕಾರಿಡಾರ್ ನಿರ್ಮಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು, ಅಲ್ಲದೆ ಕೆರೆಯ ಒತ್ತುವರಿಯ ಬಗ್ಗೆ ಹತ್ತು ದಿನದ ಒಳಗೆ ಸರ್ವೆ ನಡೆಸಿ ವರದಿ ನೀಡುವಂತೆ ಬೆಳ್ತಂಗಡಿ ತಹಶೀಲ್ದಾರರಿಗೆ ಸ್ಥಳದಲ್ಲಿಯೇ ಸೂಚಿಸಿದರು.

ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ವೇಳೆ ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ನಟರಾಜ್ ಎಮ್.ಎ, ಇನ್ಸ್ಪೆಕ್ಟರ್ ಅಮಾನುಲ್ಲಾ, ಸುರೇಶ್ , ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕುವೆಟ್ಟು ಗ್ರಾಮ ಪಂಚಾಯತ್ ಪಿಡಿಓ ಇಮ್ತಿಯಾಜ್ , ಕಂದಾಯ ನಿರೀಕ್ಷಕ ಪ್ರತೀಷ್, ಗ್ರಾಮ ಆಡಳಿತಾಧಿಕಾರಿ ಗೌತಮಿ ಹಾಗೂ ಮತ್ತಿತರರು ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!