22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

ಗುರುವಾಯನಕೆರೆ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನ‘ಕೆರೆಗೆ’ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಡಿ.26ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆರೆಯ ಅವ್ಯವಸ್ಥೆ ಹಾಗೂ ಒತ್ತುವರಿಯ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದಿದ್ದ ಹಿನ್ನಲೆ ಬಿ.ಎಸ್.ಪಾಟೀಲ್ ಅವರು ಕುವೆಟ್ಟು ಪಂಚಾಯತ್ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದ್ದು.‌ಈ ವೇಳೆ ಕೆರೆಯ ಸುತ್ತಮುತ್ತಲಿನ ಪ್ರದೇಶದ ವಾತಾವರಣ ನೋಡಿ ಅಧಿಕಾರಿಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದು. ಕೆರೆಯ ಸುತ್ತ ಕಾರಿಡಾರ್ ನಿರ್ಮಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು, ಅಲ್ಲದೆ ಕೆರೆಯ ಒತ್ತುವರಿಯ ಬಗ್ಗೆ ಹತ್ತು ದಿನದ ಒಳಗೆ ಸರ್ವೆ ನಡೆಸಿ ವರದಿ ನೀಡುವಂತೆ ಬೆಳ್ತಂಗಡಿ ತಹಶೀಲ್ದಾರರಿಗೆ ಸ್ಥಳದಲ್ಲಿಯೇ ಸೂಚಿಸಿದರು.

ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ ವೇಳೆ ಮಂಗಳೂರು ಲೋಕಾಯುಕ್ತ ವಿಭಾಗದ ಎಸ್ಪಿ ನಟರಾಜ್ ಎಮ್.ಎ, ಇನ್ಸ್ಪೆಕ್ಟರ್ ಅಮಾನುಲ್ಲಾ, ಸುರೇಶ್ , ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿ ಶಂಕರ್, ಕುವೆಟ್ಟು ಗ್ರಾಮ ಪಂಚಾಯತ್ ಪಿಡಿಓ ಇಮ್ತಿಯಾಜ್ , ಕಂದಾಯ ನಿರೀಕ್ಷಕ ಪ್ರತೀಷ್, ಗ್ರಾಮ ಆಡಳಿತಾಧಿಕಾರಿ ಗೌತಮಿ ಹಾಗೂ ಮತ್ತಿತರರು ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ನಾಳ ಗಂಪದಕೋಡಿ ನಿವಾಸಿ ಶ್ರೀಮತಿ ನಾಗರತ್ನಮ್ಮ ನಿಧನ

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ವಾಣಿ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ತ್ರೋಬಾಲ್ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya
error: Content is protected !!