25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

ಬಜಿರೆ: ಜಾಗದ ಪಾಲಿನ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.25ರಂದು ವರದಿಯಾಗಿದೆ.


ಬಜಿರೆ ಗ್ರಾಮದ ಪದ್ಮನಿಲಯ ನಿವಾಸಿ ರತ್ನರಾಜ್ ಪಡಿವಾಳ್ ಅವರು ನೀಡಿರುವ ದೂರಿನಲ್ಲಿ ಡಿ.25 ರಂದು ಮಧ್ಯಾಹ್ನ ತಾನು ಬಜೆರೆ ಗ್ರಾಮದ ಬಾಡಾರು ತೋಟದಲ್ಲಿ ದನಗಳನ್ನು ಮೇಯಿಸುತ್ತಿರುವ ಸಮಯ 4ಮಂದಿ ಅವರು ಅಕ್ರಮವಾಗಿ ತನ್ನನ್ನು ತಡೆದು ನಿಲ್ಲಿಸಿ ಅವಾಚ್ಯಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದಾರೆ. ಹಲ್ಲೆಗೆ ಒಳಗಾದ ಅವರು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.


ಇನ್ನೊಂದು ಕುಟುಂಬದ ಸ್ವರಾಜ್ ಜೈನ್ ಅವರು ನೀಡಿರುವ ದೂರಿನಲ್ಲಿ ತಮಗೆ ಜಮೀನಿನ ಪಾಲಿನ ವಿಚಾರದಲ್ಲಿ ತಕರಾರು ಆಗಿ ಮನಸ್ತಾಪವಿದ್ದು, ಡಿ.25 ರಂದು ಮಧ್ಯಾಹ್ನ ತಾನು ತನ್ನ ತಾಯಿ ಹಾಗೂ ಅತ್ತೆಯ ಮಗ ಮತ್ತು ಪತ್ನಿಯೊಂದಿಗೆ ಬೆಂಗಳೂರಿನಿಂದ ತನ್ನ ಮನೆ ಬಜಿರೆ ಗ್ರಾಮದ ಬಾಡಾರು ಬಂದು ಮನೆಯಲ್ಲಿ ಕರೆಂಟ್ ಇಲ್ಲ ಎಂದು ವಿದ್ಯುತ್ ಮೀಟರ್ ಬೋರ್ಡು ಬಳಿ ಪ್ಯೂಸ್ ಹಾಕಲು ಹೋಗುವ ಸಮಯ ರತ್ನರಾಜ ಪಡಿವಾಲ್ ತನಗೆ ಅವಾಚ್ಯ ಶಬ್ದಗಳಿಂದ ಬೈದು ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದು ಕೋಲಿನಿಂದ ಹಲ್ಲೆ ನಡೆಸಿದ್ದು, ಗಲಾಟೆ ಬಿಡಿಸಲು ಹೋದ ತನ್ನ ತಾಯಿಯನ್ನು ದೂಡಿ ಹಾಕಿ, ತನಗೆ ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಎರಡು ಕಡೆಯ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಲಾಗಿದೆ.

Related posts

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಇಲಂತಿಲ: ಮರದಿಂದ ಬಿದ್ದಿದ್ದ ನಾರಾಯಣ ಪೂಜಾರಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷರಾದ ಅನ್ವರ್ ಮಾಣಿಪ್ಪಾಡಿ ಯವರನ್ನು ಭೇಟಿಯಾದ ಎಸ್.ಡಿ.ಪಿ.ಐ ನಾಯಕರು

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya
error: Content is protected !!