July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

ಬಜಿರೆ: ಜಾಗದ ಪಾಲಿನ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.25ರಂದು ವರದಿಯಾಗಿದೆ.


ಬಜಿರೆ ಗ್ರಾಮದ ಪದ್ಮನಿಲಯ ನಿವಾಸಿ ರತ್ನರಾಜ್ ಪಡಿವಾಳ್ ಅವರು ನೀಡಿರುವ ದೂರಿನಲ್ಲಿ ಡಿ.25 ರಂದು ಮಧ್ಯಾಹ್ನ ತಾನು ಬಜೆರೆ ಗ್ರಾಮದ ಬಾಡಾರು ತೋಟದಲ್ಲಿ ದನಗಳನ್ನು ಮೇಯಿಸುತ್ತಿರುವ ಸಮಯ 4ಮಂದಿ ಅವರು ಅಕ್ರಮವಾಗಿ ತನ್ನನ್ನು ತಡೆದು ನಿಲ್ಲಿಸಿ ಅವಾಚ್ಯಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದಾರೆ. ಹಲ್ಲೆಗೆ ಒಳಗಾದ ಅವರು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.


ಇನ್ನೊಂದು ಕುಟುಂಬದ ಸ್ವರಾಜ್ ಜೈನ್ ಅವರು ನೀಡಿರುವ ದೂರಿನಲ್ಲಿ ತಮಗೆ ಜಮೀನಿನ ಪಾಲಿನ ವಿಚಾರದಲ್ಲಿ ತಕರಾರು ಆಗಿ ಮನಸ್ತಾಪವಿದ್ದು, ಡಿ.25 ರಂದು ಮಧ್ಯಾಹ್ನ ತಾನು ತನ್ನ ತಾಯಿ ಹಾಗೂ ಅತ್ತೆಯ ಮಗ ಮತ್ತು ಪತ್ನಿಯೊಂದಿಗೆ ಬೆಂಗಳೂರಿನಿಂದ ತನ್ನ ಮನೆ ಬಜಿರೆ ಗ್ರಾಮದ ಬಾಡಾರು ಬಂದು ಮನೆಯಲ್ಲಿ ಕರೆಂಟ್ ಇಲ್ಲ ಎಂದು ವಿದ್ಯುತ್ ಮೀಟರ್ ಬೋರ್ಡು ಬಳಿ ಪ್ಯೂಸ್ ಹಾಕಲು ಹೋಗುವ ಸಮಯ ರತ್ನರಾಜ ಪಡಿವಾಲ್ ತನಗೆ ಅವಾಚ್ಯ ಶಬ್ದಗಳಿಂದ ಬೈದು ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದು ಕೋಲಿನಿಂದ ಹಲ್ಲೆ ನಡೆಸಿದ್ದು, ಗಲಾಟೆ ಬಿಡಿಸಲು ಹೋದ ತನ್ನ ತಾಯಿಯನ್ನು ದೂಡಿ ಹಾಕಿ, ತನಗೆ ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಎರಡು ಕಡೆಯ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಲಾಗಿದೆ.

Related posts

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya
error: Content is protected !!