25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

ಬಜಿರೆ: ಜಾಗದ ಪಾಲಿನ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ನಡೆದ ಹೊಡೆದಾಟದಲ್ಲಿ ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ವೇಣೂರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.25ರಂದು ವರದಿಯಾಗಿದೆ.


ಬಜಿರೆ ಗ್ರಾಮದ ಪದ್ಮನಿಲಯ ನಿವಾಸಿ ರತ್ನರಾಜ್ ಪಡಿವಾಳ್ ಅವರು ನೀಡಿರುವ ದೂರಿನಲ್ಲಿ ಡಿ.25 ರಂದು ಮಧ್ಯಾಹ್ನ ತಾನು ಬಜೆರೆ ಗ್ರಾಮದ ಬಾಡಾರು ತೋಟದಲ್ಲಿ ದನಗಳನ್ನು ಮೇಯಿಸುತ್ತಿರುವ ಸಮಯ 4ಮಂದಿ ಅವರು ಅಕ್ರಮವಾಗಿ ತನ್ನನ್ನು ತಡೆದು ನಿಲ್ಲಿಸಿ ಅವಾಚ್ಯಶಬ್ದಗಳಿಂದ ಬೈದು ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದಾರೆ. ಹಲ್ಲೆಗೆ ಒಳಗಾದ ಅವರು ಗುರುವಾಯನಕೆರೆ ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.


ಇನ್ನೊಂದು ಕುಟುಂಬದ ಸ್ವರಾಜ್ ಜೈನ್ ಅವರು ನೀಡಿರುವ ದೂರಿನಲ್ಲಿ ತಮಗೆ ಜಮೀನಿನ ಪಾಲಿನ ವಿಚಾರದಲ್ಲಿ ತಕರಾರು ಆಗಿ ಮನಸ್ತಾಪವಿದ್ದು, ಡಿ.25 ರಂದು ಮಧ್ಯಾಹ್ನ ತಾನು ತನ್ನ ತಾಯಿ ಹಾಗೂ ಅತ್ತೆಯ ಮಗ ಮತ್ತು ಪತ್ನಿಯೊಂದಿಗೆ ಬೆಂಗಳೂರಿನಿಂದ ತನ್ನ ಮನೆ ಬಜಿರೆ ಗ್ರಾಮದ ಬಾಡಾರು ಬಂದು ಮನೆಯಲ್ಲಿ ಕರೆಂಟ್ ಇಲ್ಲ ಎಂದು ವಿದ್ಯುತ್ ಮೀಟರ್ ಬೋರ್ಡು ಬಳಿ ಪ್ಯೂಸ್ ಹಾಕಲು ಹೋಗುವ ಸಮಯ ರತ್ನರಾಜ ಪಡಿವಾಲ್ ತನಗೆ ಅವಾಚ್ಯ ಶಬ್ದಗಳಿಂದ ಬೈದು ಕುತ್ತಿಗೆಯನ್ನು ಗಟ್ಟಿಯಾಗಿ ಹಿಡಿದು ಕೋಲಿನಿಂದ ಹಲ್ಲೆ ನಡೆಸಿದ್ದು, ಗಲಾಟೆ ಬಿಡಿಸಲು ಹೋದ ತನ್ನ ತಾಯಿಯನ್ನು ದೂಡಿ ಹಾಕಿ, ತನಗೆ ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ವೇಣೂರು ಠಾಣೆಯಲ್ಲಿ ಎರಡು ಕಡೆಯ ದೂರುಗಳನ್ನು ಸ್ವೀಕರಿಸಿ ಪ್ರಕರಣ ದಾಖಲಿಸಲಾಗಿದೆ.

Related posts

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya

ಬಂಗೇರ ಕುಟುಂಬಸ್ಥರಿಂದ ಸಿ. ಎಂ, ಡಿ. ಸಿ. ಎಂ ಭೇಟಿ – ಕೃತಜ್ಞತೆ ಸಲ್ಲಿಕೆ

Suddi Udaya

ನ.26: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಬೆಳ್ತಂಗಡಿ ಶಾಖೆಯ ಉದ್ಘಾಟನೆ

Suddi Udaya
error: Content is protected !!