23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರ ಕಟ್ಟೆ ಶಾಖೆ ಹಾಗೂ ಬದ್ರಿಯಾ ಯಂಗ್’ಮೆನ್ಸ್ ಪೆರಾಲ್ದರಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಪ್ರಸ್ತುತ ಮುಸ್ಲಿಮ್ ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿ ನೆಲೆ ನಿಂತಿರುವ ಮಾದಕ ವ್ಯಸನ ಮತ್ತು ಮದುವೆ ಅನಾಚಾರದ ವಿರುದ್ದ ಜಾಗೃತಿ ಸಭೆ ಡಿ.27 ರಂದು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ವಠಾರದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಬಹು ಸಂಶುದ್ದೀನ್ ದಾರಿಮಿ ಪೆರಾಲ್ದರಕಟ್ಟೆ ರವರು ನೆರವೇರಿಸಲಿದ್ದು ಬಹು ಅಬೂಬಕ್ಕರ್ ಸಿದ್ದೀಕ್ ಜಲಾಲಿ, ಖತೀಬರು ಕೇಂದ್ರ ಜುಮಾ ಮಸೀದಿ ಕಕ್ಕಿಂಜೆ ರವರು ಮದುವೆ ಅನಾಚಾರ ಪಿಡುಗಿನ ವಿರುದ್ದ ವಿಷಯ ಮಂಡಣೆಯನ್ನು ಮಾಡಲಿದ್ದಾರೆ ಹಾಗೂ ಡಾ. ರಫೀಕ್ ಮಾಸ್ಟರ್’ ರವರು ಮಾದಕ ವ್ಯಸನ ವಿಷಯದಲ್ಲಿ ಪ್ರೇರಣಾ ಭಾಷಣವನ್ನು ಮಾಡಲಿದ್ದಾರೆ.


ವೇಣೂರು ಠಾಣಾ ಸಬ್ ಇನ್ಸ್’ಪೆಕ್ಟರ್ ಶ್ರೀಶೈಲಾ ಮುರಗೋಡು, ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಇದರ ಅಧ್ಯಕ್ಷರಾದ ನವಾಝ್ ಶರೀಫ್ ಕಟ್ಟೆ ಮತ್ತು ಸ್ಯಳೀಯ ಜಮಾತ್ ಪ್ರತಿನಿಧಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಪ್ರಧಾನ ಕಾರ್ಯದರ್ಶಿ ಸಾಧಿಕ್ ಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಎಸ್,ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಮೂರನೇ ಸ್ಥಾನ ಪಡೆದ ಸುಪ್ರಿಯಾ ಎಸ್ ಇವರನ್ನು ಮೂಡುಕೋಡಿ ಬಿಲ್ಲವ ಸಂಘ ಮತ್ತು ವೇಣೂರು ಯುವವಾಹಿನಿ ಘಟಕದ ವತಿಯಿಂದ ಸನ್ಮಾನ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದಲ್ಲಿ ಗಣರಾಜ್ಯೋತ್ಸವ ಆಚರಣೆ – ಭಾರತ ವಿಶ್ವಗುರುವಾಗಬೇಕು : ಎಚ್.ಎನ್. ಚಂದ್ರಶೇಖರ್

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya
error: Content is protected !!