September 6, 2026
Uncategorized

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

ನ್ಯಾಯತರ್ಪು: ಡಿ.25. ನ್ಯಾಯತರ್ಪು ರಕೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಇದರ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ಭಜನೋತ್ಸವ ನೆರವೇರಿತು. ಬೆಳಿಗ್ಗೆ ಗಣಹೋಮ, ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರಕೇಶ್ವರಿಪದವು ಭಜನಾ ಮಂಡಳಿಯ ವಠಾರದಲ್ಲಿ ತಾಲೂಕಿನ ಸುಮಾರು 25 ಕ್ಕೂ ಹೆಚ್ಚು ವಿವಿಧ ಭಜನಾ ತಂಡಗಳಿಂದ ಏಕಕಾಲದಲ್ಲಿ ಕುಣಿತ ಭಜನೋತ್ಸವ ಜರುಗಿತು.

ಹಿಂದುತ್ವ ನಾಡಿನ ಜೀವ ನಾಡಿ, ದೇಶದ ಸಂಸ್ಕಾರ ಜೊತೆಯಲ್ಲಿ ಹಿಂದೂ ಸಂಘಟನೆ ಹಾಗೂ ಸಂಸ್ಕೃತಿಯನ್ನು ಗಟ್ಟಿಯಾಗಿಸಲು ಭಜನೆ ಒಂದಾಗಿದೆ. ಭಜನೆಯಿಂದ ಮಾನಸಿಕವಾಗಿ, ದೈಹಿಕವಾಗಿ,ಅಧ್ಯಾತ್ಮಿಕವಾಗಿ ದೇವರನ್ನು ಭಕ್ತಿಯಿಂದ ಒಳಿಸಲು ಭಜನೆಯಿಂದ ಮಾತ್ರ ಸಾಧ್ಯ ಎಂದು ಬೆಂಗಳೂರು ಯುವ ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತಾನಾಡಿದರು.

ವಿವಿಧ ಭಜನಾ ಮಂಡಳಿಗಳ ಸದಸ್ಯರಿಂದ ಏಕಕಾಲದಲ್ಲಿ ಕುಣಿತ ಭಜನೋತ್ಸವ ನಡೆಯಿತು.

ಸಾಧಕರಿಗೆ ಸನ್ಮಾನಿತರು :
ಯುವ ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ಬೆಂಗಳೂರು, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್‌. ಹಾಗೂ ಭಾರತೀಯ ಭೂಸೇನೆಯ ನಿವೃತ್ತ ಸೈನಿಕ ವಿಕ್ರಂ ಜೆ.ಎನ್‌.ವಂಜಾರೆ ಅವರನ್ನು ಸನ್ಮಾನಿಸಿ, ಗೌರವಿಸಿದರು.
ರಾತ್ರಿ ಕಲ್ಲಡ್ಕ ವಿಠಲ ನಾಯಕ್ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಿತು. ಗೌರವಾಧ್ಯಕ್ಷ ರಂಜನ್ ಎಂ.,ಅಧ್ಯಕ್ಷ ವಸಂತ ಗೌಡ ಕೆ,ಉಪಾಧ್ಯಕ್ಷ ರಮೇಶ್ ವಿ,ಕಾರ್ಯದರ್ಶಿ ಯೋಗೀಶ್ ಎಂ,ಜತೆ ಕಾರ್ಯದರ್ಶಿ ವಿನಯ್,ಕೋಶಾಧಿಕಾರಿ,ಸಹ ಅರ್ಚಕ ಶೇಖರ ಗೌಡ ಎಂ,ಪ್ರಧಾನ ಅರ್ಚಕ ಜಗನ್ನಾಥ ವಿ,ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಭಕ್ತಾದಿಗಳು ಭಾಗವಹಿಸಿದರು. ಉಮೇಶ್ ಕೇಲ್ದಡ್ಕ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ನಾಳೆ(ಮಾ.8): ಉಜಿರೆ ಪುರದೊಡೆಯ ಶ್ರೀ ಜನಾರ್ದನ ದೇವರಿಗೆ ನೂತನ ಬ್ರಹ್ಮರಥ, ಪುಷ್ಪರಥ ಸಮರ್ಪಣೆ:

Suddi Udaya

ವೇಣೂರು: ಪಶು ಅಧಿಕಾರಿ ಸುಕೀರ್ತಿ ಜೈನ್ ಸೇವಾ ನಿವೃತ್ತಿ: ಸನ್ಮಾನ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya
error: Content is protected !!