23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

ನ್ಯಾಯತರ್ಪು: ಡಿ.25. ನ್ಯಾಯತರ್ಪು ರಕೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಇದರ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ಭಜನೋತ್ಸವ ನೆರವೇರಿತು. ಬೆಳಿಗ್ಗೆ ಗಣಹೋಮ, ಸಂಜೆ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ರಕೇಶ್ವರಿಪದವು ಭಜನಾ ಮಂಡಳಿಯ ವಠಾರದಲ್ಲಿ ತಾಲೂಕಿನ ಸುಮಾರು 25 ಕ್ಕೂ ಹೆಚ್ಚು ವಿವಿಧ ಭಜನಾ ತಂಡಗಳಿಂದ ಏಕಕಾಲದಲ್ಲಿ ಕುಣಿತ ಭಜನೋತ್ಸವ ಜರುಗಿತು.

ಹಿಂದುತ್ವ ನಾಡಿನ ಜೀವ ನಾಡಿ, ದೇಶದ ಸಂಸ್ಕಾರ ಜೊತೆಯಲ್ಲಿ ಹಿಂದೂ ಸಂಘಟನೆ ಹಾಗೂ ಸಂಸ್ಕೃತಿಯನ್ನು ಗಟ್ಟಿಯಾಗಿಸಲು ಭಜನೆ ಒಂದಾಗಿದೆ. ಭಜನೆಯಿಂದ ಮಾನಸಿಕವಾಗಿ, ದೈಹಿಕವಾಗಿ,ಅಧ್ಯಾತ್ಮಿಕವಾಗಿ ದೇವರನ್ನು ಭಕ್ತಿಯಿಂದ ಒಳಿಸಲು ಭಜನೆಯಿಂದ ಮಾತ್ರ ಸಾಧ್ಯ ಎಂದು ಬೆಂಗಳೂರು ಯುವ ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ ಮಾತಾನಾಡಿದರು.

ವಿವಿಧ ಭಜನಾ ಮಂಡಳಿಗಳ ಸದಸ್ಯರಿಂದ ಏಕಕಾಲದಲ್ಲಿ ಕುಣಿತ ಭಜನೋತ್ಸವ ನಡೆಯಿತು.

ಸಾಧಕರಿಗೆ ಸನ್ಮಾನಿತರು :
ಯುವ ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ ಬೆಂಗಳೂರು, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್‌. ಹಾಗೂ ಭಾರತೀಯ ಭೂಸೇನೆಯ ನಿವೃತ್ತ ಸೈನಿಕ ವಿಕ್ರಂ ಜೆ.ಎನ್‌.ವಂಜಾರೆ ಅವರನ್ನು ಸನ್ಮಾನಿಸಿ, ಗೌರವಿಸಿದರು.
ರಾತ್ರಿ ಕಲ್ಲಡ್ಕ ವಿಠಲ ನಾಯಕ್ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಿತು. ಗೌರವಾಧ್ಯಕ್ಷ ರಂಜನ್ ಎಂ.,ಅಧ್ಯಕ್ಷ ವಸಂತ ಗೌಡ ಕೆ,ಉಪಾಧ್ಯಕ್ಷ ರಮೇಶ್ ವಿ,ಕಾರ್ಯದರ್ಶಿ ಯೋಗೀಶ್ ಎಂ,ಜತೆ ಕಾರ್ಯದರ್ಶಿ ವಿನಯ್,ಕೋಶಾಧಿಕಾರಿ,ಸಹ ಅರ್ಚಕ ಶೇಖರ ಗೌಡ ಎಂ,ಪ್ರಧಾನ ಅರ್ಚಕ ಜಗನ್ನಾಥ ವಿ,ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಭಕ್ತಾದಿಗಳು ಭಾಗವಹಿಸಿದರು. ಉಮೇಶ್ ಕೇಲ್ದಡ್ಕ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

Suddi Udaya

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya
error: Content is protected !!