ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಧರ್ಮರಸು ದೈವ-ಕೊಡಮಣಿತ್ತಾಯ ಮೈಸಂದಾಯ-ಅಂಗಣ ಪಂಜುರ್ಲಿ ಕಲ್ಲುರ್ಟಿ-ಕಲ್ಕುಡ, ಕ್ಷೇತ್ರ ಗುಳಿ ದೈವಗಳಿಗೆ ಪ್ರಧಾನ ಕಲಶಾಭಿಷೇಕ, ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆಯು ಡಿ.೩೧ರಂದು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿ ಮೊಕ್ತೇಸರ ಶೀತಲ್ ಪಡಿವಾಳರ ಮಾರ್ಗದರ್ಶನದಲ್ಲಿ ಮದ್ದಡ್ಕ ಶ್ರೀನಿವಾಸ ಅಮ್ಮಣ್ಣಾಯ ಅಸ್ರಣ್ಣರ ನೇತೃತ್ವದಲ್ಲಿ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ನಡೆಯಲಿದೆ.

ಡಿ.31ರಂದು ಬೆಳಿಗ್ಗೆ ಭಂಡಾರ ಚಾವಡಿಯಲ್ಲಿ ಪ್ರಾರ್ಥನೆ ಪುಣ್ಯಾಹ ಕಲಶ ದೈವಗಳ ಭಂಡಾರ ಇಳಿಸುವುದು, ಮೂಲ ಸ್ಥಾನದಲ್ಲಿ ತೋರಣ ಮುಹೂರ್ತ, ನಾಗ ಸನ್ನಿಧಿಯಲ್ಲಿ ತನು-ತಂಬಿಲ ಸೇವೆ, ದೈವಸ್ಥಾನದಲ್ಲಿ ಪ್ರಧಾನ, ದೈವಗಳಿಗೆ ಕಲಶಾಭಿಷೇಕ ಪರ್ವ ನಡೆಯಲಿರುವುದು. ಸಂಜೆ ದೈವಗಳ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಟ್ರಸ್ಟ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ವಿಶೇಷ ಕಾರ್ಯಕಾರಣಿ ಸಭೆಗೆ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಆತಂಕ: ಮಳೆಗಾಲದಲ್ಲಿ ಪ್ರವಾಸಿಗರಿಗೆ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ

Suddi Udaya
error: Content is protected !!