26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

ಉಜಿರೆ: ಪುತ್ತೂರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ಡಿ.25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ನಟರಾಜ ವೇದಿಕೆಯಲ್ಲಿ ಜರುಗಿದ “ಶ್ರೀ ಆಂಜನೇಯ-56″ರ ಸಮಾರಂಭದಲ್ಲಿ ಯಕ್ಷಗಾನ ಸಂಘಟಕ, ಅಪೂರ್ವ ಧ್ವನಿಸುರುಳಿಗಳ ನಿರ್ಮಾಪಕ, ಅನನ್ಯ ತಾಳಮದ್ದಲೆಗಳ ರೂವಾರಿ, ನಿವೃತ್ತ ಜಮಾ ಉಗ್ರಾಣ ಮುತ್ಸದ್ದಿ ಭುಜಬಲಿ ಧರ್ಮಸ್ಥಳ ಅವರಿಗೆ “ಶ್ರೀ ಯಕ್ಷಾಂಜನೇಯ ಪ್ರಶಸ್ತಿ” ಹಾಗೂ ಖ್ಯಾತ ಯಕ್ಷಗಾನ ಭಾಗವತೆ ಭವ್ಯಶ್ರೀ ಕುಲಕುಂದ ಅವರಿಗೆ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ “ಮಹಿಳಾ ವಿಂಶತಿ ಗೌರವ” ನೀಡಿ ಅಭಿನಂದಿಸಲಾಯಿತು.

ಸ್ವರ್ಣೋದ್ಯಮಿ, ಜಿ.ಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕ ವೇ.ಮೂ. ಹರಿನಾರಾಯಣದಾಸ ಅಸ್ರಣ್ಣ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಹಿರಿಯ ಅರ್ಥಧಾರಿ ಪ್ರಭಾಕರ ಜೋಶಿ, ವಿನಯ ಕುಮಾರ್, ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ, ಕಾರ್ಯದರ್ಶಿ ಆನಂದ ಸವಣೂರು, ಕೋಶಾಧಿಕಾರಿ ದುಗ್ಗಪ್ಪ ಎನ್ ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರಪ್ರಶಸ್ತಿ ಪುರಸ್ಕೃತ ದಿವಾಕರ ಆಚಾರ್ಯ ಗೇರುಕಟ್ಟೆ ಭುಜಬಲಿ ಧರ್ಮಸ್ಥಳ ಅವರನ್ನು ಅಭಿನಂದಿಸಿದರು.

Related posts

ಧರ್ಮಸ್ಥಳ: ಸಿಡಿಲು ಬಡಿದು ವ್ಯಕ್ತಿ ಅಸ್ವಸ್ಥ

Suddi Udaya

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಕೆಸರಡ್ ಒಂಜಿ ದಿನ” ಕಾರ್ಯಕ್ರಮ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಗುರುವಾಯನಕೆರೆ ದೊಂಪದಬಲಿ ಉತ್ಸವ ಸಮಿತಿ ನೇತೃತ್ವದಲ್ಲಿ :ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕಮಾಧವ ಸಿದ್ದಕಟ್ಟೆಯವರಿಗೆ ಗೌರವಾರ್ಪಣೆ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!