July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂಡುಮುಗೇರು ದೇವಸ್ಥಾನದ ಬಳಿಯ ರೇವತಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣದ ಅಡಿಪಾಯದ ಶ್ರಮದಾನವು ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಡಿ.೨೬ರಂದು ನಡೆಸಲಾಯಿತು.

ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಘಟಕ ಸಂಯೋಜಕಿ ಶ್ರೀಮತಿ ರಶ್ಮಿತಾ ರವರ ಸಂಯೋಜನೆಯಲ್ಲಿ ನಡೆದ ಶ್ರಮದಾನದಲ್ಲಿ ಘಟಕ ಪ್ರತಿನಿಧಿ ಆನಂದ ದನಿಲ, ಅವಿನಾಶ್ ಭಿಡೆ, ಸುರೇಶ್ ಶಿಬಾಜೆ, ಸೋಮಶೇಖರ್, ಬೇಬಿ ಪೆರ್ಲ, ಹರೀಶ ವಳಗುಡ್ಡೆ, ಕಿರಣ್ ಸಂಕೇಶ, ರಮೇಶ್ ಬೈರಕಟ್ಟ ಭಾಗವಹಿಸಿದ್ದರು.

ಲಘು ಉಪಾಹಾರದ ವ್ಯವಸ್ಥೆಯನ್ನು ಹರೀಶ್ ವಳಗುಡ್ಡೆ, ಬೆಳಕಿನ ವ್ಯವಸ್ಥೆಯನ್ನು ಚಾಮುಂಡೇಶ್ವರಿ ಸೌಂಡ್ಸ್ ಮತ್ತು ಲೈಟಿಂಗ್‌ನ ದಯಾನಂದ ಶೆಟ್ಟಿ ಇವರು ಮಾಡಿಕೊಟ್ಟರು.

Related posts

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ದಿ. ವೀರಪ್ಪ ನಲ್ಕೆ ಪುಣ್ಯ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್ನು ವಿತರಣೆ

Suddi Udaya

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya
error: Content is protected !!