28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ಅವರು ಅಗಲಿದ ಸುದ್ದಿ ತಿಳಿದು ಅತೀವ ದುಃಖವಾಯಿತು.

ಅವರು ಜಾರಿಗೆ ತಂದಂತಹ ಉದ್ಯೋಗ ಖಾತ್ರಿ ಮತ್ತು ಆಹಾರ ಭದ್ರತಾ ಕಾಯ್ದೆಯಂತಹ (Food Security Act), ಯೋಜನೆಗಳು ದೇಶದ ಕೋಟ್ಯಾಂತರ ಜನರ ಬಡತನವನ್ನು ನೀಗಿಸಿತು. RTE ಶಿಕ್ಷಣ ಹಕ್ಕು ಕಾಯ್ದೆ (Right to Education ) ಬಡ ಮಕ್ಕಳಿಗೂ ಪ್ರತಿಷ್ಠಿತ‌ ಶಾಲೆಗಳಲ್ಲಿ ಓದಲು ಅವಕಾಶ ಕಲ್ಪಿಸಿತು. RTI ಕ್ರಾಂತಿಕಾರಕವಾದ ಮಾಹಿತಿ ಹಕ್ಕು ಕಾನೂನು ಆಡಳಿತದಲ್ಲಿ ಪಾರದರ್ಶಕತೆಯನ್ನು ತಂದಿತು. ದೇಶಕ್ಕೆ ಕೊಡುಗೆಯಾಗಿರುವ ಅವರ ಸಾಧನೆಗಳು ಎಂದಿಗೂ ಅಜರಾಮರ.

ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬವರ್ಗದವರಿಗೆ ಹಾಗೂ ಕೋಟ್ಯಂತರ ಅಭಿಮಾನಿ ಬಳಗದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ ಸೂಚಿಸಿದ್ದಾರೆ.


Related posts

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಧರ್ಮಸ್ಥಳ ಕ್ಷೇತ್ರದಿಂದ ಅಯೋಧ್ಯೆಗೆ ಬೆಳ್ಳಿಯ ಪೂಜಾ ಪರಿಕರ ಸಮರ್ಪಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!