24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಧರ್ಮರಸು ದೈವ-ಕೊಡಮಣಿತ್ತಾಯ ಮೈಸಂದಾಯ-ಅಂಗಣ ಪಂಜುರ್ಲಿ ಕಲ್ಲುರ್ಟಿ-ಕಲ್ಕುಡ, ಕ್ಷೇತ್ರ ಗುಳಿ ದೈವಗಳಿಗೆ ಪ್ರಧಾನ ಕಲಶಾಭಿಷೇಕ, ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆಯು ಡಿ.೩೧ರಂದು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿ ಮೊಕ್ತೇಸರ ಶೀತಲ್ ಪಡಿವಾಳರ ಮಾರ್ಗದರ್ಶನದಲ್ಲಿ ಮದ್ದಡ್ಕ ಶ್ರೀನಿವಾಸ ಅಮ್ಮಣ್ಣಾಯ ಅಸ್ರಣ್ಣರ ನೇತೃತ್ವದಲ್ಲಿ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ನಡೆಯಲಿದೆ.

ಡಿ.31ರಂದು ಬೆಳಿಗ್ಗೆ ಭಂಡಾರ ಚಾವಡಿಯಲ್ಲಿ ಪ್ರಾರ್ಥನೆ ಪುಣ್ಯಾಹ ಕಲಶ ದೈವಗಳ ಭಂಡಾರ ಇಳಿಸುವುದು, ಮೂಲ ಸ್ಥಾನದಲ್ಲಿ ತೋರಣ ಮುಹೂರ್ತ, ನಾಗ ಸನ್ನಿಧಿಯಲ್ಲಿ ತನು-ತಂಬಿಲ ಸೇವೆ, ದೈವಸ್ಥಾನದಲ್ಲಿ ಪ್ರಧಾನ, ದೈವಗಳಿಗೆ ಕಲಶಾಭಿಷೇಕ ಪರ್ವ ನಡೆಯಲಿರುವುದು. ಸಂಜೆ ದೈವಗಳ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಟ್ರಸ್ಟ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ತೆಕ್ಕಾರು ಗ್ರಾ.ಪಂ. ಅಧ್ಯಕ್ಷರಾಗಿ ರಹಿಯಾನತ್, ಉಪಾಧ್ಯಕ್ಷರಾಗಿ ಪುಷ್ಪಾ ಆಯ್ಕೆ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya

ಸಂಜೀವ ಪೂಜಾರಿ ನಾಲ್ಕೂರು ನಿಧನ

Suddi Udaya
error: Content is protected !!