23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

ಕನ್ಯಾಡಿ: ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ದಶಕ ಸಂಭ್ರಮ ಪ್ರಯುಕ್ತ ಮನೆ ಮನೆ ತಾಳಮದ್ದಳೆ ಚಾವಡಿ ಕೂಟದ ಪ್ರಥಮ ಕಾರ್ಯಕ್ರಮವು ಪುಂಜಾಲಕಟ್ಟೆ ಕುರಿಯಾಡಿಯ ಕೆ. ರಾಜಾರಾಮ್ ಶೆಟ್ಟಿಯವರ ಮನೆಯಲ್ಲಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ ಪಾರೆಂಕಿ ಮಡಂತ್ಯಾರು ಇದರ ಸಹಕಾರದೊಂದಿಗೆ ಡಿ.೨೪ರಂದು ನಡೆಯಿತು.

ಆಯೋಜಕ ರಾಜಾರಾಮ್ ಶೆಟ್ಟಿಯವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮನೆಯವರು ಬಂಧು ಮಿತ್ರರು ಉಪಸ್ಥಿತರಿದ್ದರು.

ಪ್ರಸ್ತುತಿಯಾದ ವಾಲಿ ಮೋಕ್ಷ ಪ್ರಸಂಗದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಬಾಲಕೃಷ್ಣ ಭಟ್ ಬಳ್ಳಮಂಜ, ಕಿಶೋರ್ ಶೆಟ್ಟಿ ಮುಡಾಯೂರು, ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ವಿಶ್ವನಾಥ ಆಚಾರ್ಯ ವಾಮದಪದವವು, ದೇವೀಪ್ರಸಾದ್ ಆಚಾರ್ಯ ಮಡಂತ್ಯಾರು, ಯೋಗೀಶ ಆಚಾರ್ಯ ಪಣಕಜೆ, ಕಾರ್ತಿಕ್ ಭಟ್, ಚಕ್ರತಾಳದಲ್ಲಿ ಕೇಶವ ಮಡಂತ್ಯಾರು ಸಹಕರಿಸಿದರು.

ಮುಮ್ಮೇಳದಲ್ಲಿ ಹನುಮಂತನಾಗಿ ಕಿಶೋರ್ ಗೌಡ ಬಸವನಗುಡಿ, ಸುಗ್ರೀವನಾಗಿ ಪ್ರಭಾಕರ ಪಿ.ಎಮ್, ಶ್ರೀರಾಮನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ವಾಲಿಯಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ತಾರೆಯಾಗಿ ಹರ್ಷನಾರಾಯಣ ಶೆಟ್ಟಿ ನೆತ್ತರ ಪಾತ್ರ ನಿರ್ವಹಿಸಿದರು.

ತಾಳಮದ್ದಳೆ ಪ್ರದರ್ಶನಕ್ಕೆ ಅವಕಾಶ ನೀಡಿದ ರಾಜಾರಾಮ್ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜಯರಾಮ್ ಶೆಟ್ಟಿ, ಲಕ್ಷ್ಮಣ್‌ದಾಸ್ ಕಾರ್ಯಕ್ರಮ ವ್ಯವಸ್ಥಾಪಕರಾಗಿ ಸಹಕಾರ ನೀಡಿದರು.

Related posts

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ಕಲ್ಮಂಜ: ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿ

Suddi Udaya

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya
error: Content is protected !!