25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

ಕನ್ಯಾಡಿ: ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ದಶಕ ಸಂಭ್ರಮ ಪ್ರಯುಕ್ತ ಮನೆ ಮನೆ ತಾಳಮದ್ದಳೆ ಚಾವಡಿ ಕೂಟದ ಪ್ರಥಮ ಕಾರ್ಯಕ್ರಮವು ಪುಂಜಾಲಕಟ್ಟೆ ಕುರಿಯಾಡಿಯ ಕೆ. ರಾಜಾರಾಮ್ ಶೆಟ್ಟಿಯವರ ಮನೆಯಲ್ಲಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ ಪಾರೆಂಕಿ ಮಡಂತ್ಯಾರು ಇದರ ಸಹಕಾರದೊಂದಿಗೆ ಡಿ.೨೪ರಂದು ನಡೆಯಿತು.

ಆಯೋಜಕ ರಾಜಾರಾಮ್ ಶೆಟ್ಟಿಯವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮನೆಯವರು ಬಂಧು ಮಿತ್ರರು ಉಪಸ್ಥಿತರಿದ್ದರು.

ಪ್ರಸ್ತುತಿಯಾದ ವಾಲಿ ಮೋಕ್ಷ ಪ್ರಸಂಗದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಬಾಲಕೃಷ್ಣ ಭಟ್ ಬಳ್ಳಮಂಜ, ಕಿಶೋರ್ ಶೆಟ್ಟಿ ಮುಡಾಯೂರು, ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ವಿಶ್ವನಾಥ ಆಚಾರ್ಯ ವಾಮದಪದವವು, ದೇವೀಪ್ರಸಾದ್ ಆಚಾರ್ಯ ಮಡಂತ್ಯಾರು, ಯೋಗೀಶ ಆಚಾರ್ಯ ಪಣಕಜೆ, ಕಾರ್ತಿಕ್ ಭಟ್, ಚಕ್ರತಾಳದಲ್ಲಿ ಕೇಶವ ಮಡಂತ್ಯಾರು ಸಹಕರಿಸಿದರು.

ಮುಮ್ಮೇಳದಲ್ಲಿ ಹನುಮಂತನಾಗಿ ಕಿಶೋರ್ ಗೌಡ ಬಸವನಗುಡಿ, ಸುಗ್ರೀವನಾಗಿ ಪ್ರಭಾಕರ ಪಿ.ಎಮ್, ಶ್ರೀರಾಮನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ವಾಲಿಯಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ತಾರೆಯಾಗಿ ಹರ್ಷನಾರಾಯಣ ಶೆಟ್ಟಿ ನೆತ್ತರ ಪಾತ್ರ ನಿರ್ವಹಿಸಿದರು.

ತಾಳಮದ್ದಳೆ ಪ್ರದರ್ಶನಕ್ಕೆ ಅವಕಾಶ ನೀಡಿದ ರಾಜಾರಾಮ್ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜಯರಾಮ್ ಶೆಟ್ಟಿ, ಲಕ್ಷ್ಮಣ್‌ದಾಸ್ ಕಾರ್ಯಕ್ರಮ ವ್ಯವಸ್ಥಾಪಕರಾಗಿ ಸಹಕಾರ ನೀಡಿದರು.

Related posts

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವದ ಬೆಳ್ಳಿಹಬ್ಬ ಮಹೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya
error: Content is protected !!