April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

ಕನ್ಯಾಡಿ: ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ದಶಕ ಸಂಭ್ರಮ ಪ್ರಯುಕ್ತ ಮನೆ ಮನೆ ತಾಳಮದ್ದಳೆ ಚಾವಡಿ ಕೂಟದ ಪ್ರಥಮ ಕಾರ್ಯಕ್ರಮವು ಪುಂಜಾಲಕಟ್ಟೆ ಕುರಿಯಾಡಿಯ ಕೆ. ರಾಜಾರಾಮ್ ಶೆಟ್ಟಿಯವರ ಮನೆಯಲ್ಲಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ ಪಾರೆಂಕಿ ಮಡಂತ್ಯಾರು ಇದರ ಸಹಕಾರದೊಂದಿಗೆ ಡಿ.೨೪ರಂದು ನಡೆಯಿತು.

ಆಯೋಜಕ ರಾಜಾರಾಮ್ ಶೆಟ್ಟಿಯವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮನೆಯವರು ಬಂಧು ಮಿತ್ರರು ಉಪಸ್ಥಿತರಿದ್ದರು.

ಪ್ರಸ್ತುತಿಯಾದ ವಾಲಿ ಮೋಕ್ಷ ಪ್ರಸಂಗದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ, ಬಾಲಕೃಷ್ಣ ಭಟ್ ಬಳ್ಳಮಂಜ, ಕಿಶೋರ್ ಶೆಟ್ಟಿ ಮುಡಾಯೂರು, ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ವಿಶ್ವನಾಥ ಆಚಾರ್ಯ ವಾಮದಪದವವು, ದೇವೀಪ್ರಸಾದ್ ಆಚಾರ್ಯ ಮಡಂತ್ಯಾರು, ಯೋಗೀಶ ಆಚಾರ್ಯ ಪಣಕಜೆ, ಕಾರ್ತಿಕ್ ಭಟ್, ಚಕ್ರತಾಳದಲ್ಲಿ ಕೇಶವ ಮಡಂತ್ಯಾರು ಸಹಕರಿಸಿದರು.

ಮುಮ್ಮೇಳದಲ್ಲಿ ಹನುಮಂತನಾಗಿ ಕಿಶೋರ್ ಗೌಡ ಬಸವನಗುಡಿ, ಸುಗ್ರೀವನಾಗಿ ಪ್ರಭಾಕರ ಪಿ.ಎಮ್, ಶ್ರೀರಾಮನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ವಾಲಿಯಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ತಾರೆಯಾಗಿ ಹರ್ಷನಾರಾಯಣ ಶೆಟ್ಟಿ ನೆತ್ತರ ಪಾತ್ರ ನಿರ್ವಹಿಸಿದರು.

ತಾಳಮದ್ದಳೆ ಪ್ರದರ್ಶನಕ್ಕೆ ಅವಕಾಶ ನೀಡಿದ ರಾಜಾರಾಮ್ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜಯರಾಮ್ ಶೆಟ್ಟಿ, ಲಕ್ಷ್ಮಣ್‌ದಾಸ್ ಕಾರ್ಯಕ್ರಮ ವ್ಯವಸ್ಥಾಪಕರಾಗಿ ಸಹಕಾರ ನೀಡಿದರು.

Related posts

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya
error: Content is protected !!