25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

ಅರಸಿನಮಕ್ಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂಡುಮುಗೇರು ದೇವಸ್ಥಾನದ ಬಳಿಯ ರೇವತಿ ಎಂಬವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಮಂಜೂರಾದ ವಾತ್ಸಲ್ಯ ಮನೆ ನಿರ್ಮಾಣದ ಅಡಿಪಾಯದ ಶ್ರಮದಾನವು ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ಡಿ.೨೬ರಂದು ನಡೆಸಲಾಯಿತು.

ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ರವರ ಮಾರ್ಗದರ್ಶನದಲ್ಲಿ ಘಟಕ ಸಂಯೋಜಕಿ ಶ್ರೀಮತಿ ರಶ್ಮಿತಾ ರವರ ಸಂಯೋಜನೆಯಲ್ಲಿ ನಡೆದ ಶ್ರಮದಾನದಲ್ಲಿ ಘಟಕ ಪ್ರತಿನಿಧಿ ಆನಂದ ದನಿಲ, ಅವಿನಾಶ್ ಭಿಡೆ, ಸುರೇಶ್ ಶಿಬಾಜೆ, ಸೋಮಶೇಖರ್, ಬೇಬಿ ಪೆರ್ಲ, ಹರೀಶ ವಳಗುಡ್ಡೆ, ಕಿರಣ್ ಸಂಕೇಶ, ರಮೇಶ್ ಬೈರಕಟ್ಟ ಭಾಗವಹಿಸಿದ್ದರು.

ಲಘು ಉಪಾಹಾರದ ವ್ಯವಸ್ಥೆಯನ್ನು ಹರೀಶ್ ವಳಗುಡ್ಡೆ, ಬೆಳಕಿನ ವ್ಯವಸ್ಥೆಯನ್ನು ಚಾಮುಂಡೇಶ್ವರಿ ಸೌಂಡ್ಸ್ ಮತ್ತು ಲೈಟಿಂಗ್‌ನ ದಯಾನಂದ ಶೆಟ್ಟಿ ಇವರು ಮಾಡಿಕೊಟ್ಟರು.

Related posts

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya
error: Content is protected !!