22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ಅವರು ಅಗಲಿದ ಸುದ್ದಿ ತಿಳಿದು ಅತೀವ ದುಃಖವಾಯಿತು.

ಅವರು ಜಾರಿಗೆ ತಂದಂತಹ ಉದ್ಯೋಗ ಖಾತ್ರಿ ಮತ್ತು ಆಹಾರ ಭದ್ರತಾ ಕಾಯ್ದೆಯಂತಹ (Food Security Act), ಯೋಜನೆಗಳು ದೇಶದ ಕೋಟ್ಯಾಂತರ ಜನರ ಬಡತನವನ್ನು ನೀಗಿಸಿತು. RTE ಶಿಕ್ಷಣ ಹಕ್ಕು ಕಾಯ್ದೆ (Right to Education ) ಬಡ ಮಕ್ಕಳಿಗೂ ಪ್ರತಿಷ್ಠಿತ‌ ಶಾಲೆಗಳಲ್ಲಿ ಓದಲು ಅವಕಾಶ ಕಲ್ಪಿಸಿತು. RTI ಕ್ರಾಂತಿಕಾರಕವಾದ ಮಾಹಿತಿ ಹಕ್ಕು ಕಾನೂನು ಆಡಳಿತದಲ್ಲಿ ಪಾರದರ್ಶಕತೆಯನ್ನು ತಂದಿತು. ದೇಶಕ್ಕೆ ಕೊಡುಗೆಯಾಗಿರುವ ಅವರ ಸಾಧನೆಗಳು ಎಂದಿಗೂ ಅಜರಾಮರ.

ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬವರ್ಗದವರಿಗೆ ಹಾಗೂ ಕೋಟ್ಯಂತರ ಅಭಿಮಾನಿ ಬಳಗದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ ಸೂಚಿಸಿದ್ದಾರೆ.


Related posts

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಕಾಯರ್ತಡ್ಕದ ಅಂಬಿಕಾ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!